12ನೇ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು ಎಂದು ಗ್ರಾಮದ ಮುಖಂಡ ಉದಯ್ ಆರಾಧ್ಯ ತಿಳಿಸಿದರು.
ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ತೂಬಗೆರೆ ಹೋಬಳಿ ಕೇಂದ್ರದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಅವರು, ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ ಎಂದರು.
ಬಸವಣ್ಣನವರ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಇದರ ಜೊತೆಗೆ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡುವುದು ಅತ್ಯಂತ ವಿಶೇಷವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಗ್ರಾಮದ ಹಿರಿಯರಾದ ವೆಂಕಟೇಶಪ್ಪ, ನಾರಾಯಣಪ್ಪ, ರವಿ ಮುಂತಾದವರಿದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…