ತೂಬಗೆರೆ ಗ್ರಾಮದಲ್ಲಿ ಬಸವ ಜಯಂತಿ ಅದ್ಧೂರಿ ಆಚರಣೆ

12ನೇ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, ಮತ್ತು ಶಾಂತಿಯನ್ನು ಆಧ್ಯಾತ್ಮಿಕ ಪ್ರಜಾಪ್ರಭುತ್ವ ಮೂಲಕ ಅನುಷ್ಠಾನಗೊಳಿಸಲು ಮುಂದಾದರು ಎಂದು ಗ್ರಾಮದ ಮುಖಂಡ ಉದಯ್ ಆರಾಧ್ಯ ತಿಳಿಸಿದರು.

ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಬಸವ ಜಯಂತಿ ಪ್ರಯುಕ್ತ ತೂಬಗೆರೆ ಹೋಬಳಿ ಕೇಂದ್ರದಲ್ಲಿ ಬಸವಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಮಹನೀಯರ ಜಯಂತಿಯನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಅವರು, ಬ್ರಾಹ್ಮಣ್ಯ – ವೈದಿಕ ಪರಂಪರೆಗೆ ಸೇರಿದ ಅನಿಷ್ಟಗಳ ವಿರುದ್ಧ ಹೋರಾಡಿ ಶೋಷಿತ ವ್ಯಕ್ತಿಗಳ ಸುಧಾರಣೆಗೆ ನಿಂತ ಮಹಾ ಮಾನವತಾವಾದಿ ಎಂದರು.

ಬಸವಣ್ಣನವರ ವಿಚಾರಧಾರೆಗಳನ್ನು ವಿಶ್ವಕ್ಕೆ ಪರಿಚಯಿಸಲು ಕರ್ನಾಟಕದ ಗಾಂಧಿಯಂದೇ ಪ್ರಸಿದ್ಧರಾಗಿರುವ ಹರ್ಡೇಕರ್ ಮಂಜಪ್ಪನವರು 1913ರಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ ಜಾರಿಗೆ ತಂದರು. ಇದರ ಜೊತೆಗೆ ರೈತಾಪಿ ಜನರು ತಮ್ಮ ಮನೆಯ ಹಸುಗಳು ಎತ್ತುಗಳನ್ನು ಪೂಜಿಸುವುದು ಸಾಕೆತ್ತುಗಳಿಗೆ ವಿಶೇಷ ಭಕ್ಷಗಳನ್ನು ನೀಡುವುದು ಅತ್ಯಂತ ವಿಶೇಷವಾಗಿದೆ ಎಂದರು.

ನೂರಾರು ಭಕ್ತರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಬಸವ ಮೂರ್ತಿಗೆ ವಿಶೇಷ ಅಲಂಕಾರದೊಂದಿಗೆ ಪೂಜಿಸಿ ಭಕ್ತಿಭಾವ ಮೆರೆದರು. ಆಗಮಿಸಿದ ಎಲ್ಲ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಮಹಾನಂದ ಆರಾಧ್ಯ, ಬೇಕರಿ ಬಸವರಾಜ್, ವೀರಭದ್ರಾರಾಧ್ಯ, ಸೋಮಣ್ಣ, ರೇಣುಕಾರಾಧ್ಯ, ಲೋಕೇಶ್, ಗ್ರಾಮದ ಹಿರಿಯರಾದ ವೆಂಕಟೇಶಪ್ಪ, ನಾರಾಯಣಪ್ಪ, ರವಿ ಮುಂತಾದವರಿದ್ದರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

4 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

6 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago