ತೂಬಗೆರೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗಳಾದ, ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿವಿಧ ಕಾಮಗಾರಿಗಳಿಗೆ ಅಂತುಇಂತು ಚಾಲನೆ ದೊರಕಿತು.

ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ

ತೂಬಗೆರೆಯಿಂದ ದೊಡ್ಡಬಳ್ಳಾಪುರ ನಗರ, ಬೆಂಗಳೂರಿಗೆ ಪ್ರತಿನಿತ್ಯ ನೂರಾರು ಮಂದಿ ಓಡಾಡುತ್ತಾರೆ. ಸೂಕ್ತ ಸಮಯಕ್ಕೆ ಸಾರಿಗೆ ಬಸ್ ಸೌಲಭ್ಯ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು. ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ಹಿನ್ನೆಲೆ ಇತ್ತೀಚೆಗೆ ಬಿಎಂಟಿಸಿ ಬಸ್ ಸೇವೆಗೆ ಚಾಲನೆ ನೀಡಲಾಗಿತ್ತು. ಇಂದು ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ ನೀಡಿ ಪ್ರಯಾಣಿಕರಿಗೆ ಅನುಕೂಲ‌ ಮಾಡಲಾಯಿತು.

ತೂಬಗೆರೆ, ಹಾಡೋನಹಳ್ಳಿ, ಕಂಟನಕುಂಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ನಗರಕ್ಕೆ ಬಸ್ ಸೇವೆ ಇರುತ್ತದೆ.

10 ಐಮಾಸ್ಟ್ ದೀಪಗಳಿಗೆ  ಚಾಲನೆ:

ತೂಬಗೆರೆಯ ಹೋಳಿಯ ಪ್ರಮುಖ ರಸ್ತೆ, ಬಸ್ ನಿಲ್ದಾಣಗಳಲ್ಲಿ ಜಿ.ಪಂ ವತಿಯಿಂದ ಹತ್ತು ಲಕ್ಷ ವೆಚ್ಚದ 10 ಐಮಾಸ್ಟ್ ದೀಪಗಳಿಗೆ ಚಾಲನೆ ದೊರಕಿತು.

ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಕುಡಿಯುವ ನೀರಿಗೆ ತೂಬಗೆರೆ ಹೋಬಳಿಯಲ್ಲಿ ಸಾಕಷ್ಟು ದೂರಗಳು ಕೇಳಿಬಂದ ಹಿನ್ನಲೆಯಲ್ಲಿ ಸಚಿವರ ಅನುಮತಿ ಮೇರೆಗೆ ಖಾಸಗಿ ಸಹಭಾಗಿತ್ವದಲ್ಲಿ ಕುಡಿಯುವ ನೀರಿನ ಘಟಕವಾದ ಆರ.ಓ ಪ್ಲಾಂಟ್ ಗೆ ಚಾಲನೆ ನೀಡಲಾಯಿತು.

ಈ ವೇಳೆ ಕೆಪಿಸಿಸಿ ಸದಸ್ಯ ಮುನಿರಾಜು ಮಾತನಾಡಿ,  ಹೋಬಳಿಯ ಜನರಿಗೆ ಅನುಕೂಲವಾಗುವಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿಲಾಗಿದೆ. ಸಚಿವರು ಬಸ್ ಸೇವೆ ಒದಗಿಸುವ ಮೂಲಕ ಬುಹುದಿನಗಳಿಂದ ಬೇಡಿಕೆಯಿದ್ದ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ವಿವಿಧ ಕಾಮಗಾರಿಗಳನ್ನು ಕೈಗೆತ್ತುಕೊಳ್ಳುವ ಮೂಲಕ  ಹೋಬಳಿಯ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದು  ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ ಮಾತನಾಡಿ, ಸಚಿವರು  ಪ್ರತಿಯೊಂದು ಗ್ರಾಮದ ಸಮಸ್ಯೆಗಳನ್ನು ಸ್ಥಳೀಯ ಜನ ಪ್ರತಿನಿಧಿಗಳ ಸಭೆ ನಡೆಸುವ ಮೂಲಕ ಆಲಿಸಿದ್ದು. ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಅದರಂತೆಯೇ  ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದರು.

ಈ ವೇಳೆ ಜಿ.ಪಂ ಮಾಜಿ ಸದಸ್ಯ ಎನ್, ಅರವಿಂದ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ಸಿದ್ದಪ್ಪ, ಗ್ರಾ.ಪಂ ಸದಸ್ಯರಾದ ಟಿ.ವಿ‌ವೆಂಕಟೇಶ್, ಮುನಿಕೃಷ್ಣಪ್ಪ. ಕಾಂಗ್ರೆಸ್ ಮುಖಂಡರಾದ ಅಂಜಿಪ್ಪ ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

6 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago