ತೂಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಇತಿಹಾಸ ಪ್ರಸಿದ್ಧ ತೂಬಗೆರೆಯ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ತಾಲೂಕಿನ ವಿವಿಧ‌ ಗ್ರಾಮಗಳಿಂದ ಸಾವಿರಾರು‌ ಜನರು ದೇವಸ್ಥಾನಕ್ಕೆ‌ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.

ಗ್ರಾಮದ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ‌ ದೇವಾಲಯದಲ್ಲಿ ತಿರುಪತಿಯಿಂದ ತಂದಿರುವ ಉತ್ಸವ ಮೂರ್ತಿಗೆ ಇಲ್ಲಿ‌ ನಿತ್ಯ‌ ಪೂಜೆ‌ ನಡೆಯುತ್ತದೆ. ಚೋಳರ ಕಾಲದಲ್ಲಿ‌ ಲಕ್ಷಿ ನರಸಿಂಹಸ್ವಾಮಿ ದೇವಾಲಯವಾಗಿತ್ತು. ಉಗ್ರಸ್ವರೂಪಿಯಾದ ನರಸಿಂಹಸ್ವಾಮಿಗೆ ಅಂಟು‌ಮುಂಟು ಆಗುತ್ತಿರಲಿಲ್ಲ.‌ ಹೀಗಾಗಿ‌ ಮಹಿಳೆಯರು ದೇವಾಲಯಕ್ಕೆ ಬರಲು ಹೆದರುತ್ತಿದ್ದರು. ಆಗ ಅಂದಿನ ಪಾಳೆಗಾರರಿಗೆ ಕನಸಿನಲ್ಲಿ‌ ಬಂದ ಸ್ವಾಮಿಯೇ ತಿರುಪತಿಯಿಂದ ವಿಗ್ರಹ ತಂದು ಪ್ರತಿಷ್ಠಾಪಿಸುವಂತೆ ಸೂಚನೆಯಾಯಿತು. ಅಂತೆಯೇ ತಿರುಪತಿಗೆ ಹೋಗಿ ವಿಗ್ರಹ ಕೇಳಿದಾಗ ಒಪ್ಪಲಿಲ್ಲ. ಒಂದು ವಾರ ಅಲ್ಲಿಯೇ ತಂಗಿ ವಿಗ್ರಹಮೂರ್ತಿಯನ್ನು ಹೊತ್ತು ತರಲಾಯಿತು.

ಲಕ್ಷ್ಮಿವೆಂಕಟರಮಣಸ್ವಾಮಿ ಅವರ ಉತ್ಸವ ಮೂರ್ತಿ ತಂದು ಪ್ರತಿಷ್ಠಾಪಿಸಿದ ಬಳಿಕ ಉಗ್ರ‌ನರಸಿಂಹ ಶಾಂತರಾದರು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ದೇವಾಲಯವು ಪ್ರಸನ್ನ ಲಕ್ಷ್ಮಿವೆಂಕಟರಮಣ ಸ್ವಾಮಿ ಎಂದು ಹೆಸರಾಯಿತು‌ ಎಂದು ದೇವಾಲಯದ ಅರ್ಚಕ ನಾಗರಾಜ್ ಪ್ರತಿಕ್ರಿಯಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ದೇವಸ್ಥಾನದ ವತಿಯಿಂದ ವೈಕುಂಠ‌ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಗ್ರಾಮಸ್ಥರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಮುಂಜಾನೆಯಿಂದ ಸುತ್ತಲಿನ‌ ಗ್ರಾಮಗಳ ಜನರು ಬಂದು ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ವೈಕುಂಠ ದ್ವಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಭಕ್ತರಿಗೆ ತಿರುಪತಿ ಲಡ್ಡು ವಿತರಿಸಲಾಗುತ್ತಿದೆ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಕೃಷ್ಣಪ್ಪ, ರವಿಸಿದ್ಧಪ್ಪ ಮಾತನಾಡಿ, ವೆಂಕಟರಮಣಸ್ವಾಮಿಗೆ 600 ವರ್ಷಗಳ ಇತಿಹಾಸವಿದೆ. ಭಕ್ತರ‌ಎಲ್ಲ‌ ಅಭೀಷ್ಟೆಗಳನ್ನು ಈಡೇರಿಸುತ್ತಾ ಗ್ರಾಮ ರಕ್ಷಣೆ ಮಾಡುತ್ತಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago