ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಇತಿಹಾಸ ಪ್ರಸಿದ್ಧ ತೂಬಗೆರೆಯ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಜನರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಗ್ರಾಮದ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ತಿರುಪತಿಯಿಂದ ತಂದಿರುವ ಉತ್ಸವ ಮೂರ್ತಿಗೆ ಇಲ್ಲಿ ನಿತ್ಯ ಪೂಜೆ ನಡೆಯುತ್ತದೆ. ಚೋಳರ ಕಾಲದಲ್ಲಿ ಲಕ್ಷಿ ನರಸಿಂಹಸ್ವಾಮಿ ದೇವಾಲಯವಾಗಿತ್ತು. ಉಗ್ರಸ್ವರೂಪಿಯಾದ ನರಸಿಂಹಸ್ವಾಮಿಗೆ ಅಂಟುಮುಂಟು ಆಗುತ್ತಿರಲಿಲ್ಲ. ಹೀಗಾಗಿ ಮಹಿಳೆಯರು ದೇವಾಲಯಕ್ಕೆ ಬರಲು ಹೆದರುತ್ತಿದ್ದರು. ಆಗ ಅಂದಿನ ಪಾಳೆಗಾರರಿಗೆ ಕನಸಿನಲ್ಲಿ ಬಂದ ಸ್ವಾಮಿಯೇ ತಿರುಪತಿಯಿಂದ ವಿಗ್ರಹ ತಂದು ಪ್ರತಿಷ್ಠಾಪಿಸುವಂತೆ ಸೂಚನೆಯಾಯಿತು. ಅಂತೆಯೇ ತಿರುಪತಿಗೆ ಹೋಗಿ ವಿಗ್ರಹ ಕೇಳಿದಾಗ ಒಪ್ಪಲಿಲ್ಲ. ಒಂದು ವಾರ ಅಲ್ಲಿಯೇ ತಂಗಿ ವಿಗ್ರಹಮೂರ್ತಿಯನ್ನು ಹೊತ್ತು ತರಲಾಯಿತು.
ಲಕ್ಷ್ಮಿವೆಂಕಟರಮಣಸ್ವಾಮಿ ಅವರ ಉತ್ಸವ ಮೂರ್ತಿ ತಂದು ಪ್ರತಿಷ್ಠಾಪಿಸಿದ ಬಳಿಕ ಉಗ್ರನರಸಿಂಹ ಶಾಂತರಾದರು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ದೇವಾಲಯವು ಪ್ರಸನ್ನ ಲಕ್ಷ್ಮಿವೆಂಕಟರಮಣ ಸ್ವಾಮಿ ಎಂದು ಹೆಸರಾಯಿತು ಎಂದು ದೇವಾಲಯದ ಅರ್ಚಕ ನಾಗರಾಜ್ ಪ್ರತಿಕ್ರಿಯಿಸಿದರು.
ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ದೇವಸ್ಥಾನದ ವತಿಯಿಂದ ವೈಕುಂಠ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಗ್ರಾಮಸ್ಥರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಮುಂಜಾನೆಯಿಂದ ಸುತ್ತಲಿನ ಗ್ರಾಮಗಳ ಜನರು ಬಂದು ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ವೈಕುಂಠ ದ್ವಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಭಕ್ತರಿಗೆ ತಿರುಪತಿ ಲಡ್ಡು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಕೃಷ್ಣಪ್ಪ, ರವಿಸಿದ್ಧಪ್ಪ ಮಾತನಾಡಿ, ವೆಂಕಟರಮಣಸ್ವಾಮಿಗೆ 600 ವರ್ಷಗಳ ಇತಿಹಾಸವಿದೆ. ಭಕ್ತರಎಲ್ಲ ಅಭೀಷ್ಟೆಗಳನ್ನು ಈಡೇರಿಸುತ್ತಾ ಗ್ರಾಮ ರಕ್ಷಣೆ ಮಾಡುತ್ತಿದೆ ಎಂದು ವಿವರಿಸಿದರು.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…