ತೂಬಗೆರೆ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಇತಿಹಾಸ ಪ್ರಸಿದ್ಧ ತೂಬಗೆರೆಯ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ತಾಲೂಕಿನ ವಿವಿಧ‌ ಗ್ರಾಮಗಳಿಂದ ಸಾವಿರಾರು‌ ಜನರು ದೇವಸ್ಥಾನಕ್ಕೆ‌ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.

ಗ್ರಾಮದ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ‌ ದೇವಾಲಯದಲ್ಲಿ ತಿರುಪತಿಯಿಂದ ತಂದಿರುವ ಉತ್ಸವ ಮೂರ್ತಿಗೆ ಇಲ್ಲಿ‌ ನಿತ್ಯ‌ ಪೂಜೆ‌ ನಡೆಯುತ್ತದೆ. ಚೋಳರ ಕಾಲದಲ್ಲಿ‌ ಲಕ್ಷಿ ನರಸಿಂಹಸ್ವಾಮಿ ದೇವಾಲಯವಾಗಿತ್ತು. ಉಗ್ರಸ್ವರೂಪಿಯಾದ ನರಸಿಂಹಸ್ವಾಮಿಗೆ ಅಂಟು‌ಮುಂಟು ಆಗುತ್ತಿರಲಿಲ್ಲ.‌ ಹೀಗಾಗಿ‌ ಮಹಿಳೆಯರು ದೇವಾಲಯಕ್ಕೆ ಬರಲು ಹೆದರುತ್ತಿದ್ದರು. ಆಗ ಅಂದಿನ ಪಾಳೆಗಾರರಿಗೆ ಕನಸಿನಲ್ಲಿ‌ ಬಂದ ಸ್ವಾಮಿಯೇ ತಿರುಪತಿಯಿಂದ ವಿಗ್ರಹ ತಂದು ಪ್ರತಿಷ್ಠಾಪಿಸುವಂತೆ ಸೂಚನೆಯಾಯಿತು. ಅಂತೆಯೇ ತಿರುಪತಿಗೆ ಹೋಗಿ ವಿಗ್ರಹ ಕೇಳಿದಾಗ ಒಪ್ಪಲಿಲ್ಲ. ಒಂದು ವಾರ ಅಲ್ಲಿಯೇ ತಂಗಿ ವಿಗ್ರಹಮೂರ್ತಿಯನ್ನು ಹೊತ್ತು ತರಲಾಯಿತು.

ಲಕ್ಷ್ಮಿವೆಂಕಟರಮಣಸ್ವಾಮಿ ಅವರ ಉತ್ಸವ ಮೂರ್ತಿ ತಂದು ಪ್ರತಿಷ್ಠಾಪಿಸಿದ ಬಳಿಕ ಉಗ್ರ‌ನರಸಿಂಹ ಶಾಂತರಾದರು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ದೇವಾಲಯವು ಪ್ರಸನ್ನ ಲಕ್ಷ್ಮಿವೆಂಕಟರಮಣ ಸ್ವಾಮಿ ಎಂದು ಹೆಸರಾಯಿತು‌ ಎಂದು ದೇವಾಲಯದ ಅರ್ಚಕ ನಾಗರಾಜ್ ಪ್ರತಿಕ್ರಿಯಿಸಿದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ದೇವಸ್ಥಾನದ ವತಿಯಿಂದ ವೈಕುಂಠ‌ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಗ್ರಾಮಸ್ಥರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಮುಂಜಾನೆಯಿಂದ ಸುತ್ತಲಿನ‌ ಗ್ರಾಮಗಳ ಜನರು ಬಂದು ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ವೈಕುಂಠ ದ್ವಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಭಕ್ತರಿಗೆ ತಿರುಪತಿ ಲಡ್ಡು ವಿತರಿಸಲಾಗುತ್ತಿದೆ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಕೃಷ್ಣಪ್ಪ, ರವಿಸಿದ್ಧಪ್ಪ ಮಾತನಾಡಿ, ವೆಂಕಟರಮಣಸ್ವಾಮಿಗೆ 600 ವರ್ಷಗಳ ಇತಿಹಾಸವಿದೆ. ಭಕ್ತರ‌ಎಲ್ಲ‌ ಅಭೀಷ್ಟೆಗಳನ್ನು ಈಡೇರಿಸುತ್ತಾ ಗ್ರಾಮ ರಕ್ಷಣೆ ಮಾಡುತ್ತಿದೆ ಎಂದು ವಿವರಿಸಿದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 hour ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

7 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

11 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

14 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago