ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಇತಿಹಾಸ ಪ್ರಸಿದ್ಧ ತೂಬಗೆರೆಯ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಜನರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಗ್ರಾಮದ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ತಿರುಪತಿಯಿಂದ ತಂದಿರುವ ಉತ್ಸವ ಮೂರ್ತಿಗೆ ಇಲ್ಲಿ ನಿತ್ಯ ಪೂಜೆ ನಡೆಯುತ್ತದೆ. ಚೋಳರ ಕಾಲದಲ್ಲಿ ಲಕ್ಷಿ ನರಸಿಂಹಸ್ವಾಮಿ ದೇವಾಲಯವಾಗಿತ್ತು. ಉಗ್ರಸ್ವರೂಪಿಯಾದ ನರಸಿಂಹಸ್ವಾಮಿಗೆ ಅಂಟುಮುಂಟು ಆಗುತ್ತಿರಲಿಲ್ಲ. ಹೀಗಾಗಿ ಮಹಿಳೆಯರು ದೇವಾಲಯಕ್ಕೆ ಬರಲು ಹೆದರುತ್ತಿದ್ದರು. ಆಗ ಅಂದಿನ ಪಾಳೆಗಾರರಿಗೆ ಕನಸಿನಲ್ಲಿ ಬಂದ ಸ್ವಾಮಿಯೇ ತಿರುಪತಿಯಿಂದ ವಿಗ್ರಹ ತಂದು ಪ್ರತಿಷ್ಠಾಪಿಸುವಂತೆ ಸೂಚನೆಯಾಯಿತು. ಅಂತೆಯೇ ತಿರುಪತಿಗೆ ಹೋಗಿ ವಿಗ್ರಹ ಕೇಳಿದಾಗ ಒಪ್ಪಲಿಲ್ಲ. ಒಂದು ವಾರ ಅಲ್ಲಿಯೇ ತಂಗಿ ವಿಗ್ರಹಮೂರ್ತಿಯನ್ನು ಹೊತ್ತು ತರಲಾಯಿತು.
ಲಕ್ಷ್ಮಿವೆಂಕಟರಮಣಸ್ವಾಮಿ ಅವರ ಉತ್ಸವ ಮೂರ್ತಿ ತಂದು ಪ್ರತಿಷ್ಠಾಪಿಸಿದ ಬಳಿಕ ಉಗ್ರನರಸಿಂಹ ಶಾಂತರಾದರು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ದೇವಾಲಯವು ಪ್ರಸನ್ನ ಲಕ್ಷ್ಮಿವೆಂಕಟರಮಣ ಸ್ವಾಮಿ ಎಂದು ಹೆಸರಾಯಿತು ಎಂದು ದೇವಾಲಯದ ಅರ್ಚಕ ನಾಗರಾಜ್ ಪ್ರತಿಕ್ರಿಯಿಸಿದರು.
ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ದೇವಸ್ಥಾನದ ವತಿಯಿಂದ ವೈಕುಂಠ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಗ್ರಾಮಸ್ಥರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಮುಂಜಾನೆಯಿಂದ ಸುತ್ತಲಿನ ಗ್ರಾಮಗಳ ಜನರು ಬಂದು ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ವೈಕುಂಠ ದ್ವಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಭಕ್ತರಿಗೆ ತಿರುಪತಿ ಲಡ್ಡು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಕೃಷ್ಣಪ್ಪ, ರವಿಸಿದ್ಧಪ್ಪ ಮಾತನಾಡಿ, ವೆಂಕಟರಮಣಸ್ವಾಮಿಗೆ 600 ವರ್ಷಗಳ ಇತಿಹಾಸವಿದೆ. ಭಕ್ತರಎಲ್ಲ ಅಭೀಷ್ಟೆಗಳನ್ನು ಈಡೇರಿಸುತ್ತಾ ಗ್ರಾಮ ರಕ್ಷಣೆ ಮಾಡುತ್ತಿದೆ ಎಂದು ವಿವರಿಸಿದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…