ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಇತಿಹಾಸ ಪ್ರಸಿದ್ಧ ತೂಬಗೆರೆಯ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಜನರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಗ್ರಾಮದ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ತಿರುಪತಿಯಿಂದ ತಂದಿರುವ ಉತ್ಸವ ಮೂರ್ತಿಗೆ ಇಲ್ಲಿ ನಿತ್ಯ ಪೂಜೆ ನಡೆಯುತ್ತದೆ. ಚೋಳರ ಕಾಲದಲ್ಲಿ ಲಕ್ಷಿ ನರಸಿಂಹಸ್ವಾಮಿ ದೇವಾಲಯವಾಗಿತ್ತು. ಉಗ್ರಸ್ವರೂಪಿಯಾದ ನರಸಿಂಹಸ್ವಾಮಿಗೆ ಅಂಟುಮುಂಟು ಆಗುತ್ತಿರಲಿಲ್ಲ. ಹೀಗಾಗಿ ಮಹಿಳೆಯರು ದೇವಾಲಯಕ್ಕೆ ಬರಲು ಹೆದರುತ್ತಿದ್ದರು. ಆಗ ಅಂದಿನ ಪಾಳೆಗಾರರಿಗೆ ಕನಸಿನಲ್ಲಿ ಬಂದ ಸ್ವಾಮಿಯೇ ತಿರುಪತಿಯಿಂದ ವಿಗ್ರಹ ತಂದು ಪ್ರತಿಷ್ಠಾಪಿಸುವಂತೆ ಸೂಚನೆಯಾಯಿತು. ಅಂತೆಯೇ ತಿರುಪತಿಗೆ ಹೋಗಿ ವಿಗ್ರಹ ಕೇಳಿದಾಗ ಒಪ್ಪಲಿಲ್ಲ. ಒಂದು ವಾರ ಅಲ್ಲಿಯೇ ತಂಗಿ ವಿಗ್ರಹಮೂರ್ತಿಯನ್ನು ಹೊತ್ತು ತರಲಾಯಿತು.
ಲಕ್ಷ್ಮಿವೆಂಕಟರಮಣಸ್ವಾಮಿ ಅವರ ಉತ್ಸವ ಮೂರ್ತಿ ತಂದು ಪ್ರತಿಷ್ಠಾಪಿಸಿದ ಬಳಿಕ ಉಗ್ರನರಸಿಂಹ ಶಾಂತರಾದರು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ದೇವಾಲಯವು ಪ್ರಸನ್ನ ಲಕ್ಷ್ಮಿವೆಂಕಟರಮಣ ಸ್ವಾಮಿ ಎಂದು ಹೆಸರಾಯಿತು ಎಂದು ದೇವಾಲಯದ ಅರ್ಚಕ ನಾಗರಾಜ್ ಪ್ರತಿಕ್ರಿಯಿಸಿದರು.
ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ದೇವಸ್ಥಾನದ ವತಿಯಿಂದ ವೈಕುಂಠ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಗ್ರಾಮಸ್ಥರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಮುಂಜಾನೆಯಿಂದ ಸುತ್ತಲಿನ ಗ್ರಾಮಗಳ ಜನರು ಬಂದು ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ವೈಕುಂಠ ದ್ವಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಭಕ್ತರಿಗೆ ತಿರುಪತಿ ಲಡ್ಡು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಕೃಷ್ಣಪ್ಪ, ರವಿಸಿದ್ಧಪ್ಪ ಮಾತನಾಡಿ, ವೆಂಕಟರಮಣಸ್ವಾಮಿಗೆ 600 ವರ್ಷಗಳ ಇತಿಹಾಸವಿದೆ. ಭಕ್ತರಎಲ್ಲ ಅಭೀಷ್ಟೆಗಳನ್ನು ಈಡೇರಿಸುತ್ತಾ ಗ್ರಾಮ ರಕ್ಷಣೆ ಮಾಡುತ್ತಿದೆ ಎಂದು ವಿವರಿಸಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…