ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ. ಇತಿಹಾಸ ಪ್ರಸಿದ್ಧ ತೂಬಗೆರೆಯ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ತಾಲೂಕಿನ ವಿವಿಧ ಗ್ರಾಮಗಳಿಂದ ಸಾವಿರಾರು ಜನರು ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಗ್ರಾಮದ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ತಿರುಪತಿಯಿಂದ ತಂದಿರುವ ಉತ್ಸವ ಮೂರ್ತಿಗೆ ಇಲ್ಲಿ ನಿತ್ಯ ಪೂಜೆ ನಡೆಯುತ್ತದೆ. ಚೋಳರ ಕಾಲದಲ್ಲಿ ಲಕ್ಷಿ ನರಸಿಂಹಸ್ವಾಮಿ ದೇವಾಲಯವಾಗಿತ್ತು. ಉಗ್ರಸ್ವರೂಪಿಯಾದ ನರಸಿಂಹಸ್ವಾಮಿಗೆ ಅಂಟುಮುಂಟು ಆಗುತ್ತಿರಲಿಲ್ಲ. ಹೀಗಾಗಿ ಮಹಿಳೆಯರು ದೇವಾಲಯಕ್ಕೆ ಬರಲು ಹೆದರುತ್ತಿದ್ದರು. ಆಗ ಅಂದಿನ ಪಾಳೆಗಾರರಿಗೆ ಕನಸಿನಲ್ಲಿ ಬಂದ ಸ್ವಾಮಿಯೇ ತಿರುಪತಿಯಿಂದ ವಿಗ್ರಹ ತಂದು ಪ್ರತಿಷ್ಠಾಪಿಸುವಂತೆ ಸೂಚನೆಯಾಯಿತು. ಅಂತೆಯೇ ತಿರುಪತಿಗೆ ಹೋಗಿ ವಿಗ್ರಹ ಕೇಳಿದಾಗ ಒಪ್ಪಲಿಲ್ಲ. ಒಂದು ವಾರ ಅಲ್ಲಿಯೇ ತಂಗಿ ವಿಗ್ರಹಮೂರ್ತಿಯನ್ನು ಹೊತ್ತು ತರಲಾಯಿತು.
ಲಕ್ಷ್ಮಿವೆಂಕಟರಮಣಸ್ವಾಮಿ ಅವರ ಉತ್ಸವ ಮೂರ್ತಿ ತಂದು ಪ್ರತಿಷ್ಠಾಪಿಸಿದ ಬಳಿಕ ಉಗ್ರನರಸಿಂಹ ಶಾಂತರಾದರು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ದೇವಾಲಯವು ಪ್ರಸನ್ನ ಲಕ್ಷ್ಮಿವೆಂಕಟರಮಣ ಸ್ವಾಮಿ ಎಂದು ಹೆಸರಾಯಿತು ಎಂದು ದೇವಾಲಯದ ಅರ್ಚಕ ನಾಗರಾಜ್ ಪ್ರತಿಕ್ರಿಯಿಸಿದರು.
ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ದೇವಸ್ಥಾನದ ವತಿಯಿಂದ ವೈಕುಂಠ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಗ್ರಾಮಸ್ಥರಿಂದ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಮುಂಜಾನೆಯಿಂದ ಸುತ್ತಲಿನ ಗ್ರಾಮಗಳ ಜನರು ಬಂದು ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ. ವೈಕುಂಠ ದ್ವಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಭಕ್ತರಿಗೆ ತಿರುಪತಿ ಲಡ್ಡು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ಕೃಷ್ಣಪ್ಪ, ರವಿಸಿದ್ಧಪ್ಪ ಮಾತನಾಡಿ, ವೆಂಕಟರಮಣಸ್ವಾಮಿಗೆ 600 ವರ್ಷಗಳ ಇತಿಹಾಸವಿದೆ. ಭಕ್ತರಎಲ್ಲ ಅಭೀಷ್ಟೆಗಳನ್ನು ಈಡೇರಿಸುತ್ತಾ ಗ್ರಾಮ ರಕ್ಷಣೆ ಮಾಡುತ್ತಿದೆ ಎಂದು ವಿವರಿಸಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…