ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಾರಾಣಪ್ಪನವರ ನಿಧನಕ್ಕ ಸಂತಾಪ ವ್ಯಕ್ತಪಡಿಸಿದ ಲಾಯರ್ ಪ್ರತಾಪ್, ಹಳ್ಳಿರೈತ ಅಂಬರೀಷ್, ಸೇರಿದಂತೆ ರಾಜಕೀಯ ಮುಖಂಡರು, ರೈತರು ನಾರಾಯಣಪ್ಪ ತೂಬಗೆರೆಯ ಹಿರಿಯ ಮುಖಂಡರು, ಸಹಕಾರ ಕ್ಷೇತ್ರದಲ್ಲಿ ರೈತರಿಗೆ ಸಾಲ ಕೊಡಿಸುವ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು, ಈ ಕಾರಣದಿಂದ ಅವರನ್ನು ತೂಬಗೆರೆ ಸುತ್ತಮುತ್ತಲಿನ ರೈತರು ಸಬ್ಸಿಡಿ ನಾರಾಯಣಪ್ಪ ಅಂತಾನೇ ಕರೆಯುತ್ತಿದ್ದರು. ಆರ್.ಎಲ್.ಜಾಲಪ್ಪನವರು ಗರಡಿಯಲ್ಲಿ ಪಳಗಿದ ಮುಖಂಡರು, ಜೆ.ನರಸಿಂಹಸ್ವಾಮಿಯವರ ಸ್ನೇಹಿತರಾಗಿದ್ದರು. ತೂಬಗೆರೆಯಲ್ಲಿ ಅನ್ನದಾತರಾಗಿದ್ದ ಅವರು, ತೂಬಗೆರೆಯಲ್ಲಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಬರುವ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆಯನ್ನ ಮಾಡುತ್ತಿದ್ದರು, ಅವರ ಸಾವು ತೂಬಗೆರೆ ಹೋಬಳಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…