ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಾರಾಣಪ್ಪನವರ ನಿಧನಕ್ಕ ಸಂತಾಪ ವ್ಯಕ್ತಪಡಿಸಿದ ಲಾಯರ್ ಪ್ರತಾಪ್, ಹಳ್ಳಿರೈತ ಅಂಬರೀಷ್, ಸೇರಿದಂತೆ ರಾಜಕೀಯ ಮುಖಂಡರು, ರೈತರು ನಾರಾಯಣಪ್ಪ ತೂಬಗೆರೆಯ ಹಿರಿಯ ಮುಖಂಡರು, ಸಹಕಾರ ಕ್ಷೇತ್ರದಲ್ಲಿ ರೈತರಿಗೆ ಸಾಲ ಕೊಡಿಸುವ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು, ಈ ಕಾರಣದಿಂದ ಅವರನ್ನು ತೂಬಗೆರೆ ಸುತ್ತಮುತ್ತಲಿನ ರೈತರು ಸಬ್ಸಿಡಿ ನಾರಾಯಣಪ್ಪ ಅಂತಾನೇ ಕರೆಯುತ್ತಿದ್ದರು. ಆರ್.ಎಲ್.ಜಾಲಪ್ಪನವರು ಗರಡಿಯಲ್ಲಿ ಪಳಗಿದ ಮುಖಂಡರು, ಜೆ.ನರಸಿಂಹಸ್ವಾಮಿಯವರ ಸ್ನೇಹಿತರಾಗಿದ್ದರು. ತೂಬಗೆರೆಯಲ್ಲಿ ಅನ್ನದಾತರಾಗಿದ್ದ ಅವರು, ತೂಬಗೆರೆಯಲ್ಲಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಬರುವ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆಯನ್ನ ಮಾಡುತ್ತಿದ್ದರು, ಅವರ ಸಾವು ತೂಬಗೆರೆ ಹೋಬಳಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…