ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಾರಾಣಪ್ಪನವರ ನಿಧನಕ್ಕ ಸಂತಾಪ ವ್ಯಕ್ತಪಡಿಸಿದ ಲಾಯರ್ ಪ್ರತಾಪ್, ಹಳ್ಳಿರೈತ ಅಂಬರೀಷ್, ಸೇರಿದಂತೆ ರಾಜಕೀಯ ಮುಖಂಡರು, ರೈತರು ನಾರಾಯಣಪ್ಪ ತೂಬಗೆರೆಯ ಹಿರಿಯ ಮುಖಂಡರು, ಸಹಕಾರ ಕ್ಷೇತ್ರದಲ್ಲಿ ರೈತರಿಗೆ ಸಾಲ ಕೊಡಿಸುವ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು, ಈ ಕಾರಣದಿಂದ ಅವರನ್ನು ತೂಬಗೆರೆ ಸುತ್ತಮುತ್ತಲಿನ ರೈತರು ಸಬ್ಸಿಡಿ ನಾರಾಯಣಪ್ಪ ಅಂತಾನೇ ಕರೆಯುತ್ತಿದ್ದರು. ಆರ್.ಎಲ್.ಜಾಲಪ್ಪನವರು ಗರಡಿಯಲ್ಲಿ ಪಳಗಿದ ಮುಖಂಡರು, ಜೆ.ನರಸಿಂಹಸ್ವಾಮಿಯವರ ಸ್ನೇಹಿತರಾಗಿದ್ದರು. ತೂಬಗೆರೆಯಲ್ಲಿ ಅನ್ನದಾತರಾಗಿದ್ದ ಅವರು, ತೂಬಗೆರೆಯಲ್ಲಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಬರುವ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆಯನ್ನ ಮಾಡುತ್ತಿದ್ದರು, ಅವರ ಸಾವು ತೂಬಗೆರೆ ಹೋಬಳಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…