ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷರಾಗಿ ಆಯ್ಕೆಯಾದ ದೇವನಹಳ್ಳಿಯ ಕೆ.ಸಿ. ಮಂಜುನಾಥ್, ವಿಜಯಪುರದ ಕೆ. ವೆಂಕಟೇಶ್, ತೂಬಗೆರೆಯ ರವಿ ಸಿದ್ದಪ್ಪ ಅವರನ್ನು ಶ್ರೀ ಘಾಟಿಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಶುಭಾಶಯಗಳನ್ನು ಕೋರುತ್ತಾ, ಅಭಿನಂದಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ರವಿ ಸಿದ್ದಪ್ಪ ಮಾತನಾಡಿ, ನನಗೆ ಈ ಅವಕಾಶ ನೀಡಿದಂತ ಎಲ್ಲರಿಗೂ ಧನ್ಯವಾದಗಳು. ಹೋಬಳಿಯಲ್ಲಿ ಪಕ್ಷವನ್ನು ಸದೃಢ ಮಾಡಲು ಕಾಯಾ ವಾಚ ಮನಸ ಕೆಲಸ ಮಾಡುತ್ತೇನೆ. ತಳ(ಬೂತ್)ಮಟ್ಟದಿಂದ ಎಲ್ಲರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಕೆಪಿಸಿಸಿ ವಕ್ತಾರ ಲಕ್ಷ್ಮೀಪತಿ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್, ಮುನಿರಾಜು ಎಸ್.ಡಿ ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ನರಸಿಂಹಮೂರ್ತಿ ತೂಬಗೆರೆ ಯೂತ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸೇರಿದಂತೆ ಇತರರು ಇದ್ದರು.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…