ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷರಾಗಿ ಆಯ್ಕೆಯಾದ ದೇವನಹಳ್ಳಿಯ ಕೆ.ಸಿ. ಮಂಜುನಾಥ್, ವಿಜಯಪುರದ ಕೆ. ವೆಂಕಟೇಶ್, ತೂಬಗೆರೆಯ ರವಿ ಸಿದ್ದಪ್ಪ ಅವರನ್ನು ಶ್ರೀ ಘಾಟಿಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಶುಭಾಶಯಗಳನ್ನು ಕೋರುತ್ತಾ, ಅಭಿನಂದಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ರವಿ ಸಿದ್ದಪ್ಪ ಮಾತನಾಡಿ, ನನಗೆ ಈ ಅವಕಾಶ ನೀಡಿದಂತ ಎಲ್ಲರಿಗೂ ಧನ್ಯವಾದಗಳು. ಹೋಬಳಿಯಲ್ಲಿ ಪಕ್ಷವನ್ನು ಸದೃಢ ಮಾಡಲು ಕಾಯಾ ವಾಚ ಮನಸ ಕೆಲಸ ಮಾಡುತ್ತೇನೆ. ತಳ(ಬೂತ್)ಮಟ್ಟದಿಂದ ಎಲ್ಲರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಕೆಪಿಸಿಸಿ ವಕ್ತಾರ ಲಕ್ಷ್ಮೀಪತಿ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್, ಮುನಿರಾಜು ಎಸ್.ಡಿ ವಕೀಲರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ನರಸಿಂಹಮೂರ್ತಿ ತೂಬಗೆರೆ ಯೂತ್ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸೇರಿದಂತೆ ಇತರರು ಇದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…