ತಾಲೂಕಿನ ತೂಬಗೆರೆ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಾರಸಿಂಹನಹಳ್ಳಿಯ ನರಸೇಗೌಡ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.
ರೈತರ ಸೇವಾ ಸಹಕಾರ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಅ.1ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ನರಸೇಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣಪ್ಪ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ನರಸೇಗೌಡ ಹಾಗೂ ಕೃಷ್ಣಪ್ಪ ಅವರನ್ನ ಕ್ರಮವಾಗಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಘೋಷಿಸಿದರು.
ಇದೇ ಸಂಧರ್ಭದಲ್ಲಿ ನೂತನ ಅದ್ಯಕ್ಷರಾದ ನರಸೇಗೌಡ, ಮಾತನಾಡಿ, ಸರ್ವ ನಿರ್ದೇಶಕರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಬೆಂಬಲಿಗರು ಹಾಗೂ ಹಿತೈಷಿಗಳು ಸಿಹಿ ತಿನಿಸಿ ಶುಭ ಹಾರೈಸಿದರು.
ಈ ವೇಳೆ ಚುನಾವಣೆ ಅಧಿಕಾರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಿಟರ್ನಿಂಗ್ ಅಫೀಸರ್ ಟಿ. ಭಾಸ್ಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಅರವಿಂದ್, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ಸಂಘದ ಮಾಜಿ ಅಧ್ಯಕ್ಷ ಮುನಿರಾಜಪ್ಪ, ನಾಗರಾಜ್, ಚಿಕ್ಕ ಪಿಳ್ಳಪ್ಪ, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ವಿ.ವೆಂಕಟೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೆಂಕಟಪ್ಪ, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಮುನಿಕೃಷ್ಣಪ್ಪ, ಗಂಗರಾಜು, ರಾಮಕೃಷ್ಣ, ಸಂಘದ ನಿರ್ದೇಶಕಿ ಅನ್ನಪೂರ್ಣಮ್ಮ, ನಾಗರತ್ನಮ್ಮ, ಮುತ್ತಮ್ಮ, ರೈತ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಹಾಗೂ ರೈತರು ಹಾಜರಿದ್ದರು.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…