ತೂಬಗೆರೆ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ರಾಜಗೋಪುರ ಉದ್ಘಾಟನೆ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ, ಕುಂಭಾಭಿಷೇಕ ಹಾಗೂ ಕಲ್ಯಾಣ ಮಂಟಪ ಶಂಕುಸ್ಥಾಪನೆಯನ್ನು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಆಹಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಕೆ.ಎಚ್.ಮುನಿಯಪ್ಪನವರು ಅದ್ಧೂರಿಯಾಗಿ ನೆರವೇರಿಸಿದರು.

ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, 108 ಕಳಸ ಸ್ಥಾಪನೆ, ಗಣಪತಿ ಹೋಮ, ಪುಣ್ಯಾಹ, ಪೂರ್ಣಾಹುತಿ ಮತ್ತು ಮಹಾ ಕುಂಭಾಭಿಷೇಕದೊಂದಿಗೆ ರಾಜಗೋಪುರ ಲೋಕಾರ್ಪಣೆಗೊಂಡಿತು. ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಾಗೂ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿತ್ತು.

ದ್ವಾರ ಪಾಲಕರಿಗೆ ಪೂಜೆ, ರಾಜಗೋಪುರಕ್ಕೆ ಪ್ರಧಾನ ದೇವರ ಆರಾಧನೆ, ಪ್ರಾಣಪ್ರತಿಷ್ಠಾಪನೆ, ಬಲಿ‌ಹರಣ,‌‌ ರಾಜಗೋಪುರದ ಮೂಲ ಮಂತ್ರದ ಹೋಮ, ತ್ವತ್ವನ್ಯಾಸ, ಕಲಾನ್ಯಾಸ ಹೋಮ, ಪೂರ್ಣಾಹುತಿ, ಕಳಸ ವಿಸರ್ಜನೆ, ಪ್ರದಕ್ಷಣೆ, ರಾಜಗೋಪುರಕ್ಕೆ ಕುಂಭಾಭಿಷೇಕ, ದೀಪಾರಾಧನೆ, ದ್ವಾರ ಉದ್ಘಾಟನೆ, ಕೂಷ್ಮಾಂಡ ಛೇದನ (ಕುಂಬಳ ಕಾಯಿ ಛೇದನ), ಗೋ ಪ್ರವೇಶ, ಕನ್ನಡಿಯಲ್ಲಿ ದೇವರ ದರ್ಶನ ಆದನಂತರ ಭಕ್ತರ‌ ಒಳ ಪ್ರವೇಶ ಮಾಡಲಾಯಿತು.

ಜಿಲ್ಲೆಯಲ್ಲಿ ಸುಮಾರು 2ಸಾವಿರದಿಂದ ಮೂರು ಸಾವಿರ ಬಡವರಿಗೆ ಸೈಟ್ ಕೊಟ್ಟು, ಮನೆ‌ಕಟ್ಟಿಸಿ ಕೊಡುತ್ತೇವೆ. ಅದರ ಜೊತೆಗೆ ಸುಮಾರು ವರ್ಷಗಳಿಂದ ಫಾರಂ ನಂ. 53‌ರ ಅರ್ಜಿ ಹಾಕಿಕೊಂಡು ಸರ್ಕಾರಿ ಭೂಮಿಯಲ್ಲಿ ಉತ್ತುಬಿತ್ತು ಬೆಳೆಬೆಳೆಯುತ್ತಿರುವ ರೈತರಿಗೆ ಆದಷ್ಟು ಬೇಗ ಜಮೀನು ಮಂಜೂರು ಮಾಡುವ ಕೆಲಸ ಮಾಡುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಕಣ್ವ ಮಠದ ಶ್ರೀ ವಿದ್ಯಾ ಕಣ್ವ ವಿರಾಜ ತೀರ್ಥ ಶ್ರೀಪಾದಗಳು, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜ್, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಮುರಳಿಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಕಾರ್ಯದರ್ಶಿ ಪ್ರತಾಪ್, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷಮ್ಮ ರಾಮಕೃಷ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್. ಅರವಿಂದ್, ಗ್ರಾಮ ಪಂಚಾಯತಿ ಸದಸ್ಯ ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ ಹಾಗೂ ಊರಿನ ಗ್ರಾಮಸ್ಥರು ಮಹಿಳೆಯರು ಕಳಸ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

5 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

10 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

11 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

15 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

16 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago