ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ, ಕುಂಭಾಭಿಷೇಕ ಹಾಗೂ ಕಲ್ಯಾಣ ಮಂಟಪ ಶಂಕುಸ್ಥಾಪನೆಯನ್ನು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಆಹಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಕೆ.ಎಚ್.ಮುನಿಯಪ್ಪನವರು ಅದ್ಧೂರಿಯಾಗಿ ನೆರವೇರಿಸಿದರು.
ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, 108 ಕಳಸ ಸ್ಥಾಪನೆ, ಗಣಪತಿ ಹೋಮ, ಪುಣ್ಯಾಹ, ಪೂರ್ಣಾಹುತಿ ಮತ್ತು ಮಹಾ ಕುಂಭಾಭಿಷೇಕದೊಂದಿಗೆ ರಾಜಗೋಪುರ ಲೋಕಾರ್ಪಣೆಗೊಂಡಿತು. ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಾಗೂ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲೆಯಲ್ಲಿ ಸುಮಾರು 2ಸಾವಿರದಿಂದ ಮೂರು ಸಾವಿರ ಬಡವರಿಗೆ ಸೈಟ್ ಕೊಟ್ಟು, ಮನೆಕಟ್ಟಿಸಿ ಕೊಡುತ್ತೇವೆ. ಅದರ ಜೊತೆಗೆ ಸುಮಾರು ವರ್ಷಗಳಿಂದ ಫಾರಂ ನಂ. 53ರ ಅರ್ಜಿ ಹಾಕಿಕೊಂಡು ಸರ್ಕಾರಿ ಭೂಮಿಯಲ್ಲಿ ಉತ್ತುಬಿತ್ತು ಬೆಳೆಬೆಳೆಯುತ್ತಿರುವ ರೈತರಿಗೆ ಆದಷ್ಟು ಬೇಗ ಜಮೀನು ಮಂಜೂರು ಮಾಡುವ ಕೆಲಸ ಮಾಡುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಕಣ್ವ ಮಠದ ಶ್ರೀ ವಿದ್ಯಾ ಕಣ್ವ ವಿರಾಜ ತೀರ್ಥ ಶ್ರೀಪಾದಗಳು, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜ್, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಮುರಳಿಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಕಾರ್ಯದರ್ಶಿ ಪ್ರತಾಪ್, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷಮ್ಮ ರಾಮಕೃಷ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್. ಅರವಿಂದ್, ಗ್ರಾಮ ಪಂಚಾಯತಿ ಸದಸ್ಯ ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ ಹಾಗೂ ಊರಿನ ಗ್ರಾಮಸ್ಥರು ಮಹಿಳೆಯರು ಕಳಸ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…