ತೂಬಗೆರೆ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ರಾಜಗೋಪುರ ಉದ್ಘಾಟನೆ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ, ಕುಂಭಾಭಿಷೇಕ ಹಾಗೂ ಕಲ್ಯಾಣ ಮಂಟಪ ಶಂಕುಸ್ಥಾಪನೆಯನ್ನು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಆಹಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಕೆ.ಎಚ್.ಮುನಿಯಪ್ಪನವರು ಅದ್ಧೂರಿಯಾಗಿ ನೆರವೇರಿಸಿದರು.

ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, 108 ಕಳಸ ಸ್ಥಾಪನೆ, ಗಣಪತಿ ಹೋಮ, ಪುಣ್ಯಾಹ, ಪೂರ್ಣಾಹುತಿ ಮತ್ತು ಮಹಾ ಕುಂಭಾಭಿಷೇಕದೊಂದಿಗೆ ರಾಜಗೋಪುರ ಲೋಕಾರ್ಪಣೆಗೊಂಡಿತು. ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಾಗೂ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿತ್ತು.

ದ್ವಾರ ಪಾಲಕರಿಗೆ ಪೂಜೆ, ರಾಜಗೋಪುರಕ್ಕೆ ಪ್ರಧಾನ ದೇವರ ಆರಾಧನೆ, ಪ್ರಾಣಪ್ರತಿಷ್ಠಾಪನೆ, ಬಲಿ‌ಹರಣ,‌‌ ರಾಜಗೋಪುರದ ಮೂಲ ಮಂತ್ರದ ಹೋಮ, ತ್ವತ್ವನ್ಯಾಸ, ಕಲಾನ್ಯಾಸ ಹೋಮ, ಪೂರ್ಣಾಹುತಿ, ಕಳಸ ವಿಸರ್ಜನೆ, ಪ್ರದಕ್ಷಣೆ, ರಾಜಗೋಪುರಕ್ಕೆ ಕುಂಭಾಭಿಷೇಕ, ದೀಪಾರಾಧನೆ, ದ್ವಾರ ಉದ್ಘಾಟನೆ, ಕೂಷ್ಮಾಂಡ ಛೇದನ (ಕುಂಬಳ ಕಾಯಿ ಛೇದನ), ಗೋ ಪ್ರವೇಶ, ಕನ್ನಡಿಯಲ್ಲಿ ದೇವರ ದರ್ಶನ ಆದನಂತರ ಭಕ್ತರ‌ ಒಳ ಪ್ರವೇಶ ಮಾಡಲಾಯಿತು.

ಜಿಲ್ಲೆಯಲ್ಲಿ ಸುಮಾರು 2ಸಾವಿರದಿಂದ ಮೂರು ಸಾವಿರ ಬಡವರಿಗೆ ಸೈಟ್ ಕೊಟ್ಟು, ಮನೆ‌ಕಟ್ಟಿಸಿ ಕೊಡುತ್ತೇವೆ. ಅದರ ಜೊತೆಗೆ ಸುಮಾರು ವರ್ಷಗಳಿಂದ ಫಾರಂ ನಂ. 53‌ರ ಅರ್ಜಿ ಹಾಕಿಕೊಂಡು ಸರ್ಕಾರಿ ಭೂಮಿಯಲ್ಲಿ ಉತ್ತುಬಿತ್ತು ಬೆಳೆಬೆಳೆಯುತ್ತಿರುವ ರೈತರಿಗೆ ಆದಷ್ಟು ಬೇಗ ಜಮೀನು ಮಂಜೂರು ಮಾಡುವ ಕೆಲಸ ಮಾಡುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಕಣ್ವ ಮಠದ ಶ್ರೀ ವಿದ್ಯಾ ಕಣ್ವ ವಿರಾಜ ತೀರ್ಥ ಶ್ರೀಪಾದಗಳು, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜ್, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಮುರಳಿಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಕಾರ್ಯದರ್ಶಿ ಪ್ರತಾಪ್, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷಮ್ಮ ರಾಮಕೃಷ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್. ಅರವಿಂದ್, ಗ್ರಾಮ ಪಂಚಾಯತಿ ಸದಸ್ಯ ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ ಹಾಗೂ ಊರಿನ ಗ್ರಾಮಸ್ಥರು ಮಹಿಳೆಯರು ಕಳಸ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

4 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

16 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

20 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago