ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ, ಕುಂಭಾಭಿಷೇಕ ಹಾಗೂ ಕಲ್ಯಾಣ ಮಂಟಪ ಶಂಕುಸ್ಥಾಪನೆಯನ್ನು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಆಹಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಕೆ.ಎಚ್.ಮುನಿಯಪ್ಪನವರು ಅದ್ಧೂರಿಯಾಗಿ ನೆರವೇರಿಸಿದರು.
ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, 108 ಕಳಸ ಸ್ಥಾಪನೆ, ಗಣಪತಿ ಹೋಮ, ಪುಣ್ಯಾಹ, ಪೂರ್ಣಾಹುತಿ ಮತ್ತು ಮಹಾ ಕುಂಭಾಭಿಷೇಕದೊಂದಿಗೆ ರಾಜಗೋಪುರ ಲೋಕಾರ್ಪಣೆಗೊಂಡಿತು. ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಾಗೂ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲೆಯಲ್ಲಿ ಸುಮಾರು 2ಸಾವಿರದಿಂದ ಮೂರು ಸಾವಿರ ಬಡವರಿಗೆ ಸೈಟ್ ಕೊಟ್ಟು, ಮನೆಕಟ್ಟಿಸಿ ಕೊಡುತ್ತೇವೆ. ಅದರ ಜೊತೆಗೆ ಸುಮಾರು ವರ್ಷಗಳಿಂದ ಫಾರಂ ನಂ. 53ರ ಅರ್ಜಿ ಹಾಕಿಕೊಂಡು ಸರ್ಕಾರಿ ಭೂಮಿಯಲ್ಲಿ ಉತ್ತುಬಿತ್ತು ಬೆಳೆಬೆಳೆಯುತ್ತಿರುವ ರೈತರಿಗೆ ಆದಷ್ಟು ಬೇಗ ಜಮೀನು ಮಂಜೂರು ಮಾಡುವ ಕೆಲಸ ಮಾಡುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಕಣ್ವ ಮಠದ ಶ್ರೀ ವಿದ್ಯಾ ಕಣ್ವ ವಿರಾಜ ತೀರ್ಥ ಶ್ರೀಪಾದಗಳು, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜ್, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಮುರಳಿಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಕಾರ್ಯದರ್ಶಿ ಪ್ರತಾಪ್, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷಮ್ಮ ರಾಮಕೃಷ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್. ಅರವಿಂದ್, ಗ್ರಾಮ ಪಂಚಾಯತಿ ಸದಸ್ಯ ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ ಹಾಗೂ ಊರಿನ ಗ್ರಾಮಸ್ಥರು ಮಹಿಳೆಯರು ಕಳಸ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…