ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಹಿತ್ಯ, ವಿಜ್ಞಾನ, ಸಂಸ್ಕೃತಿ ಸಮಾಗಮ ಕಾರ್ಯಕ್ರಮ

ಕನ್ನಡಿಗರಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಇತಿಹಾಸ, ಸಂಸ್ಕೃತಿ ಮತ್ತು ಘನತೆಯ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಇತಿಹಾಸ ಉಪನ್ಯಾಸಕಿ ಟಿ.ಎಸ್.ಸರಸ್ವತಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸರ್ಕಾರಿ  ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕರ್ನಾಟಕ ರಾಜ್ಯವಾಳಿದ ಎಲ್ಲಾ ರಾಜಮನೆಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿವೆ. ಕನ್ನಡ ಕವಿಗಳ ಸಾಹಿತ್ಯ ರಚನೆಗೆ ಬೆಂಬಲ ನೀಡಿದ್ದಾರೆ.  ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸಿರುವ ರಾಜಮನೆತಗಳು ಕನ್ನಡಿಗರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿವೆ ಎಂದರು.
ಭಾರತೀಯ ಭಾಷೆಗಳಲ್ಲಿ ಕನ್ನಡಕ್ಕೆ ಮಹತ್ವದ ಸ್ಥಾನವಿದೆ. ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಹೊಂದಿದೆ. ಕರ್ನಾಟಕದ ಆಡಳಿತ ಭಾಷೆ ಕನ್ನಡವೇ ಆಗಿದೆ.ಕನ್ನಡಿಗರ ಸಾಂಸ್ಕೃತಿಕ ಮತ್ತು ಭಾಷಾ ಪರಂಪರೆಯು ಶ್ರೀಮಂತವಾಗಿದೆ, ಇದು ಕನ್ನಡ ಭಾಷೆ ಸಾಹಿತ್ಯ, ಕಲೆ ಮತ್ತು ಶಿಲ್ಪಕಲೆಗಳಲ್ಲಿ ಎದ್ದು ಕಾಣುತ್ತದೆ. ಕನ್ನಡ ಅಭಿಮಾನಿಗಳು ಕನ್ನಡ ಪ್ರೀತಿಯನ್ನು ಪ್ರತಿ ವರ್ಷ ನವೆಂಬರ್ ತಿಂಗಳಿಗಷ್ಟೇ ಸೀಮಿತಗೊಳಿಸಬಾರದು ಎಂದರು.

ವಿಜ್ಞಾನ ಉಪನ್ಯಾಸಕಿ ಡಿ.ಪುಷ್ಪಾವತಿ ಮಾತನಾಡಿ, ವಿಜ್ಞಾನದ ಓದು ಓದುಗರಲ್ಲಿ ವೈಜ್ಞಾನಿಕ ಮನೋಭಾ ಬೆಳೆಸುತ್ತದೆ. ಇಂದು ವಿಜ್ಞಾನ ಕ್ಷೇತ್ರವು ವಿಶಾಲವಾಗಿ ಬೆಳೆದಿದೆ. ವೈಜ್ಞಾನಿಕ ವಿಧಾನವು ಮತ್ತು ತಂತ್ರಜ್ಞಾನದ ಆವಿಷ್ಕಾರಗಳು ಒಟ್ಟಿಗೆ ಸೇರಿ, ಮಾನವಕುಲದ ತಿಳುವಳಿಕೆಯನ್ನು ವಿಸ್ತರಿಸಲು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲು ನೆರವಾಗಿದೆ. ಎಂದರು.

ವಿಜ್ಞಾನ ಕ್ಷೇತ್ರದಲ್ಲಿ ವಿಭಿನ್ನ ಉದ್ಯೋಗಾವಕಾಶಗಳಿವೆ, ಇದರಲ್ಲಿ ಉನ್ನತ ಶಿಕ್ಷಣ, ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ತಾಂತ್ರಿಕ ಕೋರ್ಸ್‌ಗಳು ಪ್ರವೇಶ ಪಡೆತಲು ಸಹಕಾರಿ.‌ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ಮುಂದುವರಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ತೂಬಗೆರೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಮುನಿರಾಜು, ಸಹಶಿಕ್ಷಕರುಗಳಾದ ನಾರಾಯಣ್, ಮಂಜುಳಾ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಪದಾಧಿಕಾರಿಗಳಾದ. ವೆಂಕಟರಾಜು, ವಿ.ಎಸ್.ಹೆಗಡೆ, ಉದಯಾರಾಧ್ಯ, ಅಂಬರೀಶ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಸಫೀರ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

1 hour ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago