ತೂಬಗೆರೆ ಸರ್ಕಾರಿ ಶಾಲೆಯ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ, ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಯಿತು.

ತೂಬಗೆರೆ ಸರ್ಕಾರಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಖೋ-ಖೋ ತಂಡ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.  ಆಯ್ಕೆಯಾದ 25 ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕ್ರೀಡಾ ಸಮವಸ್ತ್ರ ಕೊಡುಗೆಯಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳ  ಸಂಘದ ಗಂಗಾಧರ್, ಜಿಲ್ಲಾ ಮಟ್ಟಕ್ಕೆ ನಮ್ಮೂರಿನ  ಶಾಲಾ ವಿದ್ಯಾರ್ಥಿಗಳು ಆಯ್ಕೆ ಆಗಿರುವುದು ತುಂಬಾ ಸಂತೋಷವಾಗಿದೆ ತಾಲೂಕು ಮಟ್ಟದಲ್ಲಿ ಅತ್ಯಂತ ಬಲಾಢ್ಯ ತಂಡಗಳನ್ನು ಎದುರಿಸಿ ಜಯಶಾಲಿಯಾಗಿರುವುದು  ಸಂತಸ ತಂದಿದೆ ಇಡೀ ಶಾಲಾ ಮಕ್ಕಳಿಗೆ ಸಿಹಿ ಹಂಚುತ್ತಿದ್ದೇವೆ ಎಂದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ,  ಮಕ್ಕಳ ಅಮೋಘ ಸಾಧನೆಯಿಂದ ಶಾಲೆಯ ಕೀರ್ತಿ ಹೆಚ್ಚಾಗಿದೆ. ಈ ಕ್ರೀಡಾಪಟುಗಳಿಗೆ ನಮ್ಮ ಊರಿನ ಗ್ರಾಮಸ್ಥರ ಬೆಂಬಲ ಸದಾ ಇರುತ್ತೆ. ಮುಂದಿನ ದಿನಗಳಲ್ಲಿ ಯಶಸ್ವಿ ಪ್ರದರ್ಶನದೊಂದಿಗೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸಿದರು.

ಮುಖ್ಯ ಶಿಕ್ಷಕ ಗಿರೀಶ್ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಗ್ರಾಮಸ್ಥರು ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದಿದ್ದರಿಂದ, ಗ್ರಾಮದ ಯುವಕರು ತರಬೇತಿ ನೀಡಿ ಈ ಸಾಧನೆ ಮಾಡಲು ಸಹಾಯ ಮಾಡಿದ್ದಾರೆ. ಅವರಿಗೆ ಶಾಲೆಯ ಪರವಾಗಿ ವಂದನೆಗಳನ್ನು ತಿಳಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತ್ಯನಾರಾಯಣಪ್ಪ, ವೆಂಕಟೇಶ್, ನಿವೃತ್ತ ಯೋಧ ಅನಂತ ರಾಜಗೋಪಾಲ್, ತರಬೇತುದಾರ ವಿನೋದ್, ಗ್ರಾಮಸ್ಥರಾದ ನರಸಿಂಹಮೂರ್ತಿ. ಮೂರ್ತಿ, ಕಿರಣ್, ಸುನಿಲ್, ಮಂಜುನಾಥ್, ಶಾಲೆಯ ಸಹ ಶಿಕ್ಷಕರು,  ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

3 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

13 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

17 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

19 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

22 hours ago