ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ, ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಯಿತು.
ತೂಬಗೆರೆ ಸರ್ಕಾರಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಖೋ-ಖೋ ತಂಡ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಆಯ್ಕೆಯಾದ 25 ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕ್ರೀಡಾ ಸಮವಸ್ತ್ರ ಕೊಡುಗೆಯಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳ ಸಂಘದ ಗಂಗಾಧರ್, ಜಿಲ್ಲಾ ಮಟ್ಟಕ್ಕೆ ನಮ್ಮೂರಿನ ಶಾಲಾ ವಿದ್ಯಾರ್ಥಿಗಳು ಆಯ್ಕೆ ಆಗಿರುವುದು ತುಂಬಾ ಸಂತೋಷವಾಗಿದೆ ತಾಲೂಕು ಮಟ್ಟದಲ್ಲಿ ಅತ್ಯಂತ ಬಲಾಢ್ಯ ತಂಡಗಳನ್ನು ಎದುರಿಸಿ ಜಯಶಾಲಿಯಾಗಿರುವುದು ಸಂತಸ ತಂದಿದೆ ಇಡೀ ಶಾಲಾ ಮಕ್ಕಳಿಗೆ ಸಿಹಿ ಹಂಚುತ್ತಿದ್ದೇವೆ ಎಂದರು.
ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ಮಕ್ಕಳ ಅಮೋಘ ಸಾಧನೆಯಿಂದ ಶಾಲೆಯ ಕೀರ್ತಿ ಹೆಚ್ಚಾಗಿದೆ. ಈ ಕ್ರೀಡಾಪಟುಗಳಿಗೆ ನಮ್ಮ ಊರಿನ ಗ್ರಾಮಸ್ಥರ ಬೆಂಬಲ ಸದಾ ಇರುತ್ತೆ. ಮುಂದಿನ ದಿನಗಳಲ್ಲಿ ಯಶಸ್ವಿ ಪ್ರದರ್ಶನದೊಂದಿಗೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸಿದರು.
ಮುಖ್ಯ ಶಿಕ್ಷಕ ಗಿರೀಶ್ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಗ್ರಾಮಸ್ಥರು ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದಿದ್ದರಿಂದ, ಗ್ರಾಮದ ಯುವಕರು ತರಬೇತಿ ನೀಡಿ ಈ ಸಾಧನೆ ಮಾಡಲು ಸಹಾಯ ಮಾಡಿದ್ದಾರೆ. ಅವರಿಗೆ ಶಾಲೆಯ ಪರವಾಗಿ ವಂದನೆಗಳನ್ನು ತಿಳಿಸುತ್ತೇನೆ ಎಂದರು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…