ತೂಬಗೆರೆ ಸರ್ಕಾರಿ ಶಾಲೆಯ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ, ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಯಿತು.

ತೂಬಗೆರೆ ಸರ್ಕಾರಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಖೋ-ಖೋ ತಂಡ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.  ಆಯ್ಕೆಯಾದ 25 ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕ್ರೀಡಾ ಸಮವಸ್ತ್ರ ಕೊಡುಗೆಯಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳ  ಸಂಘದ ಗಂಗಾಧರ್, ಜಿಲ್ಲಾ ಮಟ್ಟಕ್ಕೆ ನಮ್ಮೂರಿನ  ಶಾಲಾ ವಿದ್ಯಾರ್ಥಿಗಳು ಆಯ್ಕೆ ಆಗಿರುವುದು ತುಂಬಾ ಸಂತೋಷವಾಗಿದೆ ತಾಲೂಕು ಮಟ್ಟದಲ್ಲಿ ಅತ್ಯಂತ ಬಲಾಢ್ಯ ತಂಡಗಳನ್ನು ಎದುರಿಸಿ ಜಯಶಾಲಿಯಾಗಿರುವುದು  ಸಂತಸ ತಂದಿದೆ ಇಡೀ ಶಾಲಾ ಮಕ್ಕಳಿಗೆ ಸಿಹಿ ಹಂಚುತ್ತಿದ್ದೇವೆ ಎಂದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ,  ಮಕ್ಕಳ ಅಮೋಘ ಸಾಧನೆಯಿಂದ ಶಾಲೆಯ ಕೀರ್ತಿ ಹೆಚ್ಚಾಗಿದೆ. ಈ ಕ್ರೀಡಾಪಟುಗಳಿಗೆ ನಮ್ಮ ಊರಿನ ಗ್ರಾಮಸ್ಥರ ಬೆಂಬಲ ಸದಾ ಇರುತ್ತೆ. ಮುಂದಿನ ದಿನಗಳಲ್ಲಿ ಯಶಸ್ವಿ ಪ್ರದರ್ಶನದೊಂದಿಗೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸಿದರು.

ಮುಖ್ಯ ಶಿಕ್ಷಕ ಗಿರೀಶ್ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಗ್ರಾಮಸ್ಥರು ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದಿದ್ದರಿಂದ, ಗ್ರಾಮದ ಯುವಕರು ತರಬೇತಿ ನೀಡಿ ಈ ಸಾಧನೆ ಮಾಡಲು ಸಹಾಯ ಮಾಡಿದ್ದಾರೆ. ಅವರಿಗೆ ಶಾಲೆಯ ಪರವಾಗಿ ವಂದನೆಗಳನ್ನು ತಿಳಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತ್ಯನಾರಾಯಣಪ್ಪ, ವೆಂಕಟೇಶ್, ನಿವೃತ್ತ ಯೋಧ ಅನಂತ ರಾಜಗೋಪಾಲ್, ತರಬೇತುದಾರ ವಿನೋದ್, ಗ್ರಾಮಸ್ಥರಾದ ನರಸಿಂಹಮೂರ್ತಿ. ಮೂರ್ತಿ, ಕಿರಣ್, ಸುನಿಲ್, ಮಂಜುನಾಥ್, ಶಾಲೆಯ ಸಹ ಶಿಕ್ಷಕರು,  ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago