ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ. ವಾಸುದೇವ್ ಹಾಗೂ ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವರು ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಇಬ್ಬರನ್ನೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಟಿ.ಜಿ. ವಾಸುದೇವ್, ತಮ್ಮ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಸದಸ್ಯರು ಹಾಗೂ ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಬಲಪಡಿಸಿ, ಸದಸ್ಯರಿಗೆ ಉತ್ತಮ ಸೇವೆ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ರೈತರೊಂದಿಗೆ ನೇರ ಸಂಪರ್ಕ ಹೊಂದಿರುವ ಸಹಕಾರ ಸಂಘದ ಮೂಲಕ ರೈತರಿಗೆ ಅಗತ್ಯ ಸೇವೆಗಳು ಪರಿಣಾಮಕಾರಿಯಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು. ಸಂಘದ ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಪಡೆದು ಪಾರದರ್ಶಕ ಆಡಳಿತ ನಡೆಸಲಾಗುವುದು ಎಂದು ಹೇಳಿದರು.

ಸಂಘಕ್ಕೆ ಹೊಸ ಕಟ್ಟಡ ನಿರ್ಮಾಣಕ್ಕೆ ತೀರ್ಮಾನಿಸಲಾಗುವುದು. ರೈತರಿಗೆ ಸಿಗುವ ಎಲ್ಲಾ ಸವಲತ್ತುಗಳನ್ನು ನೇರವಾಗಿ ತಲುಪಿಸುವ ಕಾರ್ಯವನ್ನು ನೂತನ ಅಧ್ಯಕ್ಷ, ಉಪಾಧ್ಯಕ್ಷರು ಮಾಡಬೇಕು. ನಮ್ಮ ಸಹಕಾರ ಅವರಿಗೆ ಇದ್ದೇ ಇರುತ್ತದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರತಾಪ್ ಹೇಳಿದರು.

ಕಾಂಗ್ರೆಸ್ ನೆಲೆಯಲ್ಲಿ ಎನ್ ಡಿಎಗೆ ಜಯ‌ ಸಿಕ್ಕಿರುವುದು ಸಂತಸದ ವಿಷಯ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಿಂದ ಜನ ಬೇಸತ್ತತ್ತಿದ್ದಾರೆ. ಮನೆ ಮುಂದೆ ವಾಹನ ನಿಲುಗಡೆಗೂ ಟ್ಯಾಕ್ಸ್ ಕಟ್ಟಬೇಕಂತೆ. ಎ ಖಾತಾ ಬಿ ಖಾತಾ ಪಡೆಯಲು ಲಂಚ ಕೊಡಬೇಕಂತೆ. ಬಿಟ್ಟಿ ಭಾಗ್ಯಗಳನ್ನು ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ. ರೈತರಿಂದ ಬಲವಂತವಾಗಿ ಭೂಮಿಯನ್ನು ಕಸಿದಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಹೇಳಿದ್ದಾರೆ.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು, ರೈತರು ಹಾಗೂ ಮುಖಂಡರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ರಾಜ್ಯ ತೆಂಗು ನಾರು ಮಂಡಳಿ ಮಾಜಿ ಅಧ್ಯಕ್ಷ ವೆಂಕಟೇಶ್ ಬಾಬು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು, ಸುರೇಶ್ ಬಾಬು, ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ಬಿಜೆಪಿ ಮುಖಂಡ ಓಬದೇನಹಳ್ಳಿ ಮುನಿಯಪ್ಪ, ಟಿಎಪಿಎಂಸಿ ನಿರ್ದೇಶಕ ಪುರುಷೋತ್ತಮ್, ಮುಖಂಡರಾದ ಧನಂಜಯ್, ಮಂಜುನಾಥ, ಮುನೇಗೌಡ, ಅಶೋಕ್, ಹರೀಶ್, ಗಂಗಾಧರ, ಕನಕದಾಸ ಯುವ ಮುಖಂಡ ಉದಯ ಆರಾಧ್ಯ, ಮುರುಳಿ ಸೇರಿದಂತೆ ನೂತನ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

9 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

10 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

1 day ago