ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ 18 ಕೋಟಿ‌ ರೂ. ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ

ತಾಲೂಕಿನ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ₹18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ‌ ಭೂಮಿ ಪೂಜೆಯನ್ನು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ನೆರವೇರಿಸಿದರು.

ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿಸರ್ಗ ನಾರಾಯಣಸ್ವಾಮಿ ಅವರು, ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ 1 ಕೋಟಿ, ವಿಶೇಷ ಅನುದಾನದಡಿ 2 ಕೋಟಿ ಹಾಗೂ ರಸ್ತೆ ಡಾಂಬರೀಕರಣಕ್ಕೆ 15 ಕೋಟಿ ಸೇರಿ ಒಟ್ಟು 18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಲಾಗಿದೆ. ಬೆಳಿಗ್ಗೆ ಹೆಗ್ಗಡಿಹಳ್ಳಿಯಲ್ಲಿ ನೂತನ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ, ಹೈಮಾಸ್ಟ್ ದೀಪ ಅಳವಡಿಕೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಗೂಳ್ಯ, ಮೆಳೇಕೋಟೆ, ದೊಡ್ಡರಾಯಪ್ಪನಹಳ್ಳಿ, ತೂಬಗೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ್ದೇನೆ ಎಂದು ಹೇಳಿದರು.

ಹಲವು ವರ್ಷಗಳಿಂದ ತೂಬಗೆರೆ ಹೋಬಳಿ ಹಿಂದುಳಿದಿತ್ತು. ರಸ್ತೆಗಳು ಹಾಳಾಗಿದ್ದವು. ಯಾವುದೇ ಶಾಸಕರು ಬಂದರೂ ಅಭಿವೃದ್ಧಿ ಕಾಮಗಾರಿಗಳು ನಡೆದಿರಲಿಲ್ಲ. ನಾನು ಅಧಿಕಾರಕ್ಕೆ ಬಂದ ಮೇಲೆ ಹೋಬಳಿಯ ಪ್ರತಿ ಗ್ರಾಮದಲ್ಲಿ‌ 50 ಲಕ್ಷದಿಂದ 2 ಕೋಟಿಯವರೆಗಿನ ಕಾಮಗಾರಿಗಳನ್ನು ಮಾಡಿದ್ದೇನೆ ಎಂದು‌ ಹೇಳಿದರು.

ತೂಬಗೆರೆಯಲ್ಲಿ 1.38 ಕೋಟಿ‌ ಮೊತ್ತದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕಾಮಗಾರಿಗಳನ್ನು ನಿಗದಿಯೊಳಗೆ ಪೂರ್ಣಗೊಳಿಸಬೇಕು. ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಹಿರಿಯ ಮುಖಂಡ ಎಚ್.ಅಪ್ಪಯ್ಯಣ್ಣ, ದೇವನಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷ ಮಂಜುನಾಥ್. ಕಾರ್ಯದರ್ಶಿ ಮಂಜುನಾಥ್ ಎಸ್ ಬಿ. ಮುಖಂಡರಾದ ರಬ್ಬನಹಳ್ಳಿ ಮಹೇಶ್, ಪ್ರಭಾಕರ್, ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಲ್ಲವಿ, ಮೇಳೆಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ, ಉದ್ಯಮಿ ಸಂದೀಪ್, ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷ ಜಗನ್ನಾಥ, ಯುವ ಜನತಾದಳ ಅಧ್ಯಕ್ಷ ಮುರುಳಿ, ಮುಖಂಡರಾದ ರಾಮಣ್ಣ ಗೌರೀಶ್, ಉದಯ್ ಆರಾಧ್ಯ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

3 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

18 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

18 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

19 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

20 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

23 hours ago