ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ 18 ಕೋಟಿ‌ ರೂ. ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ

ತಾಲೂಕಿನ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ₹18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ‌ ಭೂಮಿ ಪೂಜೆಯನ್ನು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ನೆರವೇರಿಸಿದರು.

ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿಸರ್ಗ ನಾರಾಯಣಸ್ವಾಮಿ ಅವರು, ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ 1 ಕೋಟಿ, ವಿಶೇಷ ಅನುದಾನದಡಿ 2 ಕೋಟಿ ಹಾಗೂ ರಸ್ತೆ ಡಾಂಬರೀಕರಣಕ್ಕೆ 15 ಕೋಟಿ ಸೇರಿ ಒಟ್ಟು 18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಲಾಗಿದೆ. ಬೆಳಿಗ್ಗೆ ಹೆಗ್ಗಡಿಹಳ್ಳಿಯಲ್ಲಿ ನೂತನ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ, ಹೈಮಾಸ್ಟ್ ದೀಪ ಅಳವಡಿಕೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಗೂಳ್ಯ, ಮೆಳೇಕೋಟೆ, ದೊಡ್ಡರಾಯಪ್ಪನಹಳ್ಳಿ, ತೂಬಗೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ್ದೇನೆ ಎಂದು ಹೇಳಿದರು.

ಹಲವು ವರ್ಷಗಳಿಂದ ತೂಬಗೆರೆ ಹೋಬಳಿ ಹಿಂದುಳಿದಿತ್ತು. ರಸ್ತೆಗಳು ಹಾಳಾಗಿದ್ದವು. ಯಾವುದೇ ಶಾಸಕರು ಬಂದರೂ ಅಭಿವೃದ್ಧಿ ಕಾಮಗಾರಿಗಳು ನಡೆದಿರಲಿಲ್ಲ. ನಾನು ಅಧಿಕಾರಕ್ಕೆ ಬಂದ ಮೇಲೆ ಹೋಬಳಿಯ ಪ್ರತಿ ಗ್ರಾಮದಲ್ಲಿ‌ 50 ಲಕ್ಷದಿಂದ 2 ಕೋಟಿಯವರೆಗಿನ ಕಾಮಗಾರಿಗಳನ್ನು ಮಾಡಿದ್ದೇನೆ ಎಂದು‌ ಹೇಳಿದರು.

ತೂಬಗೆರೆಯಲ್ಲಿ 1.38 ಕೋಟಿ‌ ಮೊತ್ತದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕಾಮಗಾರಿಗಳನ್ನು ನಿಗದಿಯೊಳಗೆ ಪೂರ್ಣಗೊಳಿಸಬೇಕು. ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಹಿರಿಯ ಮುಖಂಡ ಎಚ್.ಅಪ್ಪಯ್ಯಣ್ಣ, ದೇವನಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷ ಮಂಜುನಾಥ್. ಕಾರ್ಯದರ್ಶಿ ಮಂಜುನಾಥ್ ಎಸ್ ಬಿ. ಮುಖಂಡರಾದ ರಬ್ಬನಹಳ್ಳಿ ಮಹೇಶ್, ಪ್ರಭಾಕರ್, ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಲ್ಲವಿ, ಮೇಳೆಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ, ಉದ್ಯಮಿ ಸಂದೀಪ್, ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷ ಜಗನ್ನಾಥ, ಯುವ ಜನತಾದಳ ಅಧ್ಯಕ್ಷ ಮುರುಳಿ, ಮುಖಂಡರಾದ ರಾಮಣ್ಣ ಗೌರೀಶ್, ಉದಯ್ ಆರಾಧ್ಯ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

5 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

8 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

10 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago