ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ 18 ಕೋಟಿ‌ ರೂ. ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ

ತಾಲೂಕಿನ ತೂಬಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ₹18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ‌ ಭೂಮಿ ಪೂಜೆಯನ್ನು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ನೆರವೇರಿಸಿದರು.

ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿಸರ್ಗ ನಾರಾಯಣಸ್ವಾಮಿ ಅವರು, ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ 1 ಕೋಟಿ, ವಿಶೇಷ ಅನುದಾನದಡಿ 2 ಕೋಟಿ ಹಾಗೂ ರಸ್ತೆ ಡಾಂಬರೀಕರಣಕ್ಕೆ 15 ಕೋಟಿ ಸೇರಿ ಒಟ್ಟು 18 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಲಾಗಿದೆ. ಬೆಳಿಗ್ಗೆ ಹೆಗ್ಗಡಿಹಳ್ಳಿಯಲ್ಲಿ ನೂತನ ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ, ಹೈಮಾಸ್ಟ್ ದೀಪ ಅಳವಡಿಕೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಗೂಳ್ಯ, ಮೆಳೇಕೋಟೆ, ದೊಡ್ಡರಾಯಪ್ಪನಹಳ್ಳಿ, ತೂಬಗೆರೆ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ್ದೇನೆ ಎಂದು ಹೇಳಿದರು.

ಹಲವು ವರ್ಷಗಳಿಂದ ತೂಬಗೆರೆ ಹೋಬಳಿ ಹಿಂದುಳಿದಿತ್ತು. ರಸ್ತೆಗಳು ಹಾಳಾಗಿದ್ದವು. ಯಾವುದೇ ಶಾಸಕರು ಬಂದರೂ ಅಭಿವೃದ್ಧಿ ಕಾಮಗಾರಿಗಳು ನಡೆದಿರಲಿಲ್ಲ. ನಾನು ಅಧಿಕಾರಕ್ಕೆ ಬಂದ ಮೇಲೆ ಹೋಬಳಿಯ ಪ್ರತಿ ಗ್ರಾಮದಲ್ಲಿ‌ 50 ಲಕ್ಷದಿಂದ 2 ಕೋಟಿಯವರೆಗಿನ ಕಾಮಗಾರಿಗಳನ್ನು ಮಾಡಿದ್ದೇನೆ ಎಂದು‌ ಹೇಳಿದರು.

ತೂಬಗೆರೆಯಲ್ಲಿ 1.38 ಕೋಟಿ‌ ಮೊತ್ತದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕಾಮಗಾರಿಗಳನ್ನು ನಿಗದಿಯೊಳಗೆ ಪೂರ್ಣಗೊಳಿಸಬೇಕು. ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜೆಡಿಎಸ್ ಹಿರಿಯ ಮುಖಂಡ ಎಚ್.ಅಪ್ಪಯ್ಯಣ್ಣ, ದೇವನಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಉಪಾಧ್ಯಕ್ಷ ಮಂಜುನಾಥ್. ಕಾರ್ಯದರ್ಶಿ ಮಂಜುನಾಥ್ ಎಸ್ ಬಿ. ಮುಖಂಡರಾದ ರಬ್ಬನಹಳ್ಳಿ ಮಹೇಶ್, ಪ್ರಭಾಕರ್, ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಲ್ಲವಿ, ಮೇಳೆಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ, ಉದ್ಯಮಿ ಸಂದೀಪ್, ತೂಬಗೆರೆ ಹೋಬಳಿಯ ಜೆಡಿಎಸ್ ಅಧ್ಯಕ್ಷ ಜಗನ್ನಾಥ, ಯುವ ಜನತಾದಳ ಅಧ್ಯಕ್ಷ ಮುರುಳಿ, ಮುಖಂಡರಾದ ರಾಮಣ್ಣ ಗೌರೀಶ್, ಉದಯ್ ಆರಾಧ್ಯ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

16 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago