ಮನೆ ಮುಂದಿನ ತೆಂಗಿನ ಮರ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮ ಪಂಚಾಯಿತಿಯ ಎಚ್. ಕಾಲೊನಿಯಲ್ಲಿ ಇಂದು (ಭಾನುವಾರ) ನಡೆದಿದೆ.
ಎರಡು ವರ್ಷದ ಪೃಥ್ವಿ ಮೃತಪಟ್ಟ ಮಗು. ಮೋನಿಕಾ ನಾಗರಾಜು ಎಂಬುವರು ಮನೆಯ ಮುಂದಿನ ತೆಂಗಿನ ಮರದ ಕೆಳಗೆ ತಮ್ಮ ಮಗುವನ್ನು ಆಟವಾಡಿಸುತ್ತಿದ್ದರು. ಇದ್ದಕ್ಕಿದ್ದಾಗೆ ಜೋರಾಗಿ ಬೀಸಿದ ಗಾಳಿಗೆ ತೆಂಗಿನ ಮರ ಮಗು ಮತ್ತು ತಾಯಿ ಮೇಲೆ ಉರುಳಿ ಬಿದ್ದಿದೆ. ಮರದ ಕೆಳಗೆ ಸಿಲುಕಿದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿನ ತಾಯಿ ಮೋನಿಕಾ (21) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…