ಮನೆ ಮುಂದಿನ ತೆಂಗಿನ ಮರ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮ ಪಂಚಾಯಿತಿಯ ಎಚ್. ಕಾಲೊನಿಯಲ್ಲಿ ಇಂದು (ಭಾನುವಾರ) ನಡೆದಿದೆ.
ಎರಡು ವರ್ಷದ ಪೃಥ್ವಿ ಮೃತಪಟ್ಟ ಮಗು. ಮೋನಿಕಾ ನಾಗರಾಜು ಎಂಬುವರು ಮನೆಯ ಮುಂದಿನ ತೆಂಗಿನ ಮರದ ಕೆಳಗೆ ತಮ್ಮ ಮಗುವನ್ನು ಆಟವಾಡಿಸುತ್ತಿದ್ದರು. ಇದ್ದಕ್ಕಿದ್ದಾಗೆ ಜೋರಾಗಿ ಬೀಸಿದ ಗಾಳಿಗೆ ತೆಂಗಿನ ಮರ ಮಗು ಮತ್ತು ತಾಯಿ ಮೇಲೆ ಉರುಳಿ ಬಿದ್ದಿದೆ. ಮರದ ಕೆಳಗೆ ಸಿಲುಕಿದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವಿನ ತಾಯಿ ಮೋನಿಕಾ (21) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…