ಅತಿವೇಗದಿಂದ ಬಂದು ಕಾರು ನಿಯಂತ್ರಣ ತಪ್ಪಿ ತೆರೆದ ಬಾವಿಗೆ ಬಿದ್ದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೀಲೇರು ಸಮೀಪದ ಬಾಲಂವಾರಪಲ್ಲಿ ಗ್ರಾಮದ ಬಳಿ ಘಟನೆ ನಡೆದಿದೆ.
ಮೃತರನ್ನ ಶಿವಯ್ಯ, ಗಂಗನ್ನ ಹಾಗೂ ಲೋಕೇಶ್ ಎಂದು ಗುರುತಿಸಲಾಗಿದೆ. ಮೃತರನ್ನ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಮೂಲದವರು ಎಂದು ತಿಳಿದು ಬಂದಿದೆ. ಅಡುಗೆ ಕೆಲಸಕ್ಕೆ ಹೋಗಿ ಬರುವ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ.
ಕಾರಿನಲ್ಲಿ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದ 5 ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಸುನಿಲ್ ಹಾಗೂ ತಿಪ್ಪಾರೆಡ್ಡಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನ ಪೀಲೇರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೀಲೇರು ಶಾಸಕ ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಬಾವಿಗೆ ಬಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಿ ಹೊರ ತೆಗೆಯಲಾಗಿದೆ.
ಪೀಲೇರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…