ತೆರಿಗೆ ವಸೂಲಿ ಹಾಗೂ ಸರ್ಕಾರ ಜಾರಿಗೆ ತಂದಿರುವ ಇ-ಖಾತೆ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲಾಗಿದೆ ಎಂದು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಹೇಳಿದರು.
ಸೋಮವಾರ ನಗರಸಭೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಇದೇ ಪ್ರಥಮ ಬಾರಿಗೆ ತೆರಿಗೆ ವಸೂಲಿಯಲ್ಲಿ ಶೇ100ರಷ್ಟು ಸಾಧನೆ ಮಾಡಲಾಗಿದೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಣದಿಂದಾಗಿ ನಗರದಲ್ಲಿ 31ವಾರ್ಡ್ಗಳಲ್ಲೂ ನಗರಸಭೆ ನಿಧಿಯಲ್ಲಿ ತಲಾ ₹10 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆಯಲಾಗಿದೆ ಎಂದರು.
ಉಪಾಧ್ಯಕ್ಷ ಎಂ.ಮಲ್ಲೇಶ್ ಮಾತನಾಡಿ, ನಗರದ ಕೆ.ಆರ್.ಮಾರುಕಟ್ಟೆ ಪ್ರದೇಶ, ಎಲ್ಐಸಿ ಕಚೇರಿ ಸಮೀಪ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಲಾಗುತ್ತಿದೆ. ನಗರದ ಪ್ರಮುಖ ನಾಲ್ಕು ರಸ್ತೆಗಳ ವಿಸ್ತರಣೆಗೆ ಸರ್ವೆ ಕೆಲಸ ನಡೆಸಲಾಗಿದೆ. ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ನಗರದಲ್ಲಿನ ಮುತ್ತೂರು, ನಾಗರಕೆರೆ, ಕಲ್ಯಾಣಿ ಅಭಿವೃದ್ಧಿಗೆ ಅಮೃತ-2.0 ಯೋಜನೆಯಲ್ಲಿ ₹10ಕೋಟಿ ಅನುದಾನ ದೊರೆತಿದೆ ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ವಾಣಿಜ್ಯ ಪರವಾನಗಿ ನೀಡುವಲ್ಲಿ ಶೇ70ರಷ್ಟು ಸಾಧನೆ ಮಾಡಲಾಗಿದೆ. ನಗರಸಭೆ ಪ್ರತಿ ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿಧಿಯಲ್ಲಿ ₹4ಲಕ್ಷ ನೀಡಿದ್ದಾರೆ. ಇ-ಖಾತಾ ಆಂದೋಲನದಿಂದಾಗಿ ಖಾತೆಗಳಿಗಾಗಿ ಅರ್ಜಿ ಸಲ್ಲಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಕೆಲಸ ವಿಳಂಬವಾಗುತ್ತಿವೆ. ಖಾತಾ ಆಂದೋಲನ ಕಾಲ ಮಿತಿಯಲ್ಲಿ ಮುಗಿಸಬೇಕಿದೆ. ನಗರಸಭೆಗೆ ಸಾರ್ವಜನಿಕರು ಪಾವತಿಸುವ ತೆರಿಗೆ ಸೇರಿದಂತೆ ಇತರ ಲೆಕ್ಕಪತ್ರ ಗಣಕೀಕೃತಗೊಳಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ನಿಖರವಾದ ಲೆಕ್ಕ ಹಾಗೂ ತೆರಿಗೆ ಪಾವತಿ ಸರಳೀಕೃತವಾಗಲಿದೆ ಎಂದರು.
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…