ತೆರಿಗೆ ವಸೂಲಿ ಹಾಗೂ ಸರ್ಕಾರ ಜಾರಿಗೆ ತಂದಿರುವ ಇ-ಖಾತೆ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲಾಗಿದೆ ಎಂದು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಹೇಳಿದರು.
ಸೋಮವಾರ ನಗರಸಭೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಇದೇ ಪ್ರಥಮ ಬಾರಿಗೆ ತೆರಿಗೆ ವಸೂಲಿಯಲ್ಲಿ ಶೇ100ರಷ್ಟು ಸಾಧನೆ ಮಾಡಲಾಗಿದೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಣದಿಂದಾಗಿ ನಗರದಲ್ಲಿ 31ವಾರ್ಡ್ಗಳಲ್ಲೂ ನಗರಸಭೆ ನಿಧಿಯಲ್ಲಿ ತಲಾ ₹10 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆಯಲಾಗಿದೆ ಎಂದರು.
ಉಪಾಧ್ಯಕ್ಷ ಎಂ.ಮಲ್ಲೇಶ್ ಮಾತನಾಡಿ, ನಗರದ ಕೆ.ಆರ್.ಮಾರುಕಟ್ಟೆ ಪ್ರದೇಶ, ಎಲ್ಐಸಿ ಕಚೇರಿ ಸಮೀಪ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಲಾಗುತ್ತಿದೆ. ನಗರದ ಪ್ರಮುಖ ನಾಲ್ಕು ರಸ್ತೆಗಳ ವಿಸ್ತರಣೆಗೆ ಸರ್ವೆ ಕೆಲಸ ನಡೆಸಲಾಗಿದೆ. ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ನಗರದಲ್ಲಿನ ಮುತ್ತೂರು, ನಾಗರಕೆರೆ, ಕಲ್ಯಾಣಿ ಅಭಿವೃದ್ಧಿಗೆ ಅಮೃತ-2.0 ಯೋಜನೆಯಲ್ಲಿ ₹10ಕೋಟಿ ಅನುದಾನ ದೊರೆತಿದೆ ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ವಾಣಿಜ್ಯ ಪರವಾನಗಿ ನೀಡುವಲ್ಲಿ ಶೇ70ರಷ್ಟು ಸಾಧನೆ ಮಾಡಲಾಗಿದೆ. ನಗರಸಭೆ ಪ್ರತಿ ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿಧಿಯಲ್ಲಿ ₹4ಲಕ್ಷ ನೀಡಿದ್ದಾರೆ. ಇ-ಖಾತಾ ಆಂದೋಲನದಿಂದಾಗಿ ಖಾತೆಗಳಿಗಾಗಿ ಅರ್ಜಿ ಸಲ್ಲಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಕೆಲಸ ವಿಳಂಬವಾಗುತ್ತಿವೆ. ಖಾತಾ ಆಂದೋಲನ ಕಾಲ ಮಿತಿಯಲ್ಲಿ ಮುಗಿಸಬೇಕಿದೆ. ನಗರಸಭೆಗೆ ಸಾರ್ವಜನಿಕರು ಪಾವತಿಸುವ ತೆರಿಗೆ ಸೇರಿದಂತೆ ಇತರ ಲೆಕ್ಕಪತ್ರ ಗಣಕೀಕೃತಗೊಳಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ನಿಖರವಾದ ಲೆಕ್ಕ ಹಾಗೂ ತೆರಿಗೆ ಪಾವತಿ ಸರಳೀಕೃತವಾಗಲಿದೆ ಎಂದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…