ತೆರಿಗೆ ವಸೂಲಿಯಲ್ಲಿ ಶೇ.100ರಷ್ಟು ಸಾಧನೆ-ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್‌

ತೆರಿಗೆ ವಸೂಲಿ ಹಾಗೂ ಸರ್ಕಾರ ಜಾರಿಗೆ ತಂದಿರುವ ಇ-ಖಾತೆ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲಾಗಿದೆ ಎಂದು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್‌ ಹೇಳಿದರು.

ಸೋಮವಾರ ನಗರಸಭೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಇದೇ ಪ್ರಥಮ ಬಾರಿಗೆ ತೆರಿಗೆ ವಸೂಲಿಯಲ್ಲಿ ಶೇ100ರಷ್ಟು ಸಾಧನೆ ಮಾಡಲಾಗಿದೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಣದಿಂದಾಗಿ ನಗರದಲ್ಲಿ 31ವಾರ್ಡ್‌ಗಳಲ್ಲೂ ನಗರಸಭೆ ನಿಧಿಯಲ್ಲಿ ತಲಾ ₹10 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಟೆಂಡರ್‌ ಕರೆಯಲಾಗಿದೆ ಎಂದರು.

ಉಪಾಧ್ಯಕ್ಷ ಎಂ.ಮಲ್ಲೇಶ್‌ ಮಾತನಾಡಿ, ನಗರದ ಕೆ.ಆರ್‌.ಮಾರುಕಟ್ಟೆ ಪ್ರದೇಶ, ಎಲ್‌ಐಸಿ ಕಚೇರಿ ಸಮೀಪ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಲಾಗುತ್ತಿದೆ. ನಗರದ ಪ್ರಮುಖ ನಾಲ್ಕು ರಸ್ತೆಗಳ ವಿಸ್ತರಣೆಗೆ ಸರ್ವೆ ಕೆಲಸ ನಡೆಸಲಾಗಿದೆ. ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ನಗರದಲ್ಲಿನ ಮುತ್ತೂರು, ನಾಗರಕೆರೆ, ಕಲ್ಯಾಣಿ ಅಭಿವೃದ್ಧಿಗೆ ಅಮೃತ-2.0 ಯೋಜನೆಯಲ್ಲಿ ₹10ಕೋಟಿ ಅನುದಾನ ದೊರೆತಿದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್‌.ರವಿಕುಮಾರ್‌ ಮಾತನಾಡಿ, ವಾಣಿಜ್ಯ ಪರವಾನಗಿ ನೀಡುವಲ್ಲಿ ಶೇ70ರಷ್ಟು ಸಾಧನೆ ಮಾಡಲಾಗಿದೆ. ನಗರಸಭೆ ಪ್ರತಿ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿಧಿಯಲ್ಲಿ ₹4ಲಕ್ಷ ನೀಡಿದ್ದಾರೆ. ಇ-ಖಾತಾ ಆಂದೋಲನದಿಂದಾಗಿ ಖಾತೆಗಳಿಗಾಗಿ ಅರ್ಜಿ ಸಲ್ಲಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಕೆಲಸ ವಿಳಂಬವಾಗುತ್ತಿವೆ. ಖಾತಾ ಆಂದೋಲನ ಕಾಲ ಮಿತಿಯಲ್ಲಿ ಮುಗಿಸಬೇಕಿದೆ. ನಗರಸಭೆಗೆ ಸಾರ್ವಜನಿಕರು ಪಾವತಿಸುವ ತೆರಿಗೆ ಸೇರಿದಂತೆ ಇತರ ಲೆಕ್ಕಪತ್ರ ಗಣಕೀಕೃತಗೊಳಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ನಿಖರವಾದ ಲೆಕ್ಕ ಹಾಗೂ ತೆರಿಗೆ ಪಾವತಿ ಸರಳೀಕೃತವಾಗಲಿದೆ ಎಂದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

14 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

15 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

16 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

16 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

23 hours ago