ತೆರಿಗೆ ವಸೂಲಿಯಲ್ಲಿ ಶೇ.100ರಷ್ಟು ಸಾಧನೆ-ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್‌

ತೆರಿಗೆ ವಸೂಲಿ ಹಾಗೂ ಸರ್ಕಾರ ಜಾರಿಗೆ ತಂದಿರುವ ಇ-ಖಾತೆ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲಾಗಿದೆ ಎಂದು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್‌ ಹೇಳಿದರು.

ಸೋಮವಾರ ನಗರಸಭೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಇದೇ ಪ್ರಥಮ ಬಾರಿಗೆ ತೆರಿಗೆ ವಸೂಲಿಯಲ್ಲಿ ಶೇ100ರಷ್ಟು ಸಾಧನೆ ಮಾಡಲಾಗಿದೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಣದಿಂದಾಗಿ ನಗರದಲ್ಲಿ 31ವಾರ್ಡ್‌ಗಳಲ್ಲೂ ನಗರಸಭೆ ನಿಧಿಯಲ್ಲಿ ತಲಾ ₹10 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಟೆಂಡರ್‌ ಕರೆಯಲಾಗಿದೆ ಎಂದರು.

ಉಪಾಧ್ಯಕ್ಷ ಎಂ.ಮಲ್ಲೇಶ್‌ ಮಾತನಾಡಿ, ನಗರದ ಕೆ.ಆರ್‌.ಮಾರುಕಟ್ಟೆ ಪ್ರದೇಶ, ಎಲ್‌ಐಸಿ ಕಚೇರಿ ಸಮೀಪ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಲಾಗುತ್ತಿದೆ. ನಗರದ ಪ್ರಮುಖ ನಾಲ್ಕು ರಸ್ತೆಗಳ ವಿಸ್ತರಣೆಗೆ ಸರ್ವೆ ಕೆಲಸ ನಡೆಸಲಾಗಿದೆ. ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ನಗರದಲ್ಲಿನ ಮುತ್ತೂರು, ನಾಗರಕೆರೆ, ಕಲ್ಯಾಣಿ ಅಭಿವೃದ್ಧಿಗೆ ಅಮೃತ-2.0 ಯೋಜನೆಯಲ್ಲಿ ₹10ಕೋಟಿ ಅನುದಾನ ದೊರೆತಿದೆ ಎಂದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್‌.ರವಿಕುಮಾರ್‌ ಮಾತನಾಡಿ, ವಾಣಿಜ್ಯ ಪರವಾನಗಿ ನೀಡುವಲ್ಲಿ ಶೇ70ರಷ್ಟು ಸಾಧನೆ ಮಾಡಲಾಗಿದೆ. ನಗರಸಭೆ ಪ್ರತಿ ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿಧಿಯಲ್ಲಿ ₹4ಲಕ್ಷ ನೀಡಿದ್ದಾರೆ. ಇ-ಖಾತಾ ಆಂದೋಲನದಿಂದಾಗಿ ಖಾತೆಗಳಿಗಾಗಿ ಅರ್ಜಿ ಸಲ್ಲಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಕೆಲಸ ವಿಳಂಬವಾಗುತ್ತಿವೆ. ಖಾತಾ ಆಂದೋಲನ ಕಾಲ ಮಿತಿಯಲ್ಲಿ ಮುಗಿಸಬೇಕಿದೆ. ನಗರಸಭೆಗೆ ಸಾರ್ವಜನಿಕರು ಪಾವತಿಸುವ ತೆರಿಗೆ ಸೇರಿದಂತೆ ಇತರ ಲೆಕ್ಕಪತ್ರ ಗಣಕೀಕೃತಗೊಳಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ನಿಖರವಾದ ಲೆಕ್ಕ ಹಾಗೂ ತೆರಿಗೆ ಪಾವತಿ ಸರಳೀಕೃತವಾಗಲಿದೆ ಎಂದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

5 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

5 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

11 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

17 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago