ತೆರಿಗೆ ವಸೂಲಿ ಹಾಗೂ ಸರ್ಕಾರ ಜಾರಿಗೆ ತಂದಿರುವ ಇ-ಖಾತೆ ಆಂದೋಲನ ಸಾಧನೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲಾಗಿದೆ ಎಂದು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಹೇಳಿದರು.
ಸೋಮವಾರ ನಗರಸಭೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಇದೇ ಪ್ರಥಮ ಬಾರಿಗೆ ತೆರಿಗೆ ವಸೂಲಿಯಲ್ಲಿ ಶೇ100ರಷ್ಟು ಸಾಧನೆ ಮಾಡಲಾಗಿದೆ. ಸ್ಥಳೀಯವಾಗಿ ಸಂಪನ್ಮೂಲ ಕ್ರೋಡೀಕರಣದಿಂದಾಗಿ ನಗರದಲ್ಲಿ 31ವಾರ್ಡ್ಗಳಲ್ಲೂ ನಗರಸಭೆ ನಿಧಿಯಲ್ಲಿ ತಲಾ ₹10 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆಯಲಾಗಿದೆ ಎಂದರು.
ಉಪಾಧ್ಯಕ್ಷ ಎಂ.ಮಲ್ಲೇಶ್ ಮಾತನಾಡಿ, ನಗರದ ಕೆ.ಆರ್.ಮಾರುಕಟ್ಟೆ ಪ್ರದೇಶ, ಎಲ್ಐಸಿ ಕಚೇರಿ ಸಮೀಪ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಲಾಗುತ್ತಿದೆ. ನಗರದ ಪ್ರಮುಖ ನಾಲ್ಕು ರಸ್ತೆಗಳ ವಿಸ್ತರಣೆಗೆ ಸರ್ವೆ ಕೆಲಸ ನಡೆಸಲಾಗಿದೆ. ಶಾಸಕರು ಅಗತ್ಯ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ನಗರದಲ್ಲಿನ ಮುತ್ತೂರು, ನಾಗರಕೆರೆ, ಕಲ್ಯಾಣಿ ಅಭಿವೃದ್ಧಿಗೆ ಅಮೃತ-2.0 ಯೋಜನೆಯಲ್ಲಿ ₹10ಕೋಟಿ ಅನುದಾನ ದೊರೆತಿದೆ ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್ ಮಾತನಾಡಿ, ವಾಣಿಜ್ಯ ಪರವಾನಗಿ ನೀಡುವಲ್ಲಿ ಶೇ70ರಷ್ಟು ಸಾಧನೆ ಮಾಡಲಾಗಿದೆ. ನಗರಸಭೆ ಪ್ರತಿ ವಾರ್ಡ್ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಿಧಿಯಲ್ಲಿ ₹4ಲಕ್ಷ ನೀಡಿದ್ದಾರೆ. ಇ-ಖಾತಾ ಆಂದೋಲನದಿಂದಾಗಿ ಖಾತೆಗಳಿಗಾಗಿ ಅರ್ಜಿ ಸಲ್ಲಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಕೆಲಸ ವಿಳಂಬವಾಗುತ್ತಿವೆ. ಖಾತಾ ಆಂದೋಲನ ಕಾಲ ಮಿತಿಯಲ್ಲಿ ಮುಗಿಸಬೇಕಿದೆ. ನಗರಸಭೆಗೆ ಸಾರ್ವಜನಿಕರು ಪಾವತಿಸುವ ತೆರಿಗೆ ಸೇರಿದಂತೆ ಇತರ ಲೆಕ್ಕಪತ್ರ ಗಣಕೀಕೃತಗೊಳಿಸಲಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ನಿಖರವಾದ ಲೆಕ್ಕ ಹಾಗೂ ತೆರಿಗೆ ಪಾವತಿ ಸರಳೀಕೃತವಾಗಲಿದೆ ಎಂದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…