ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ನೋಡಿ

ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು ಇಲ್ಲಿವೆ ಓದಿ…

ವಾಣಿಜ್ಯ ತೆರಿಗೆ
• ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ.

• ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ.

• ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ.

• ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು.

• ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ ರೂ. 3,183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

• ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ಅನಾಲಿಸಿಸ್ ವಿಭಾಗವನ್ನು ಬಲಪಡಿಸಬೇಕು.

• ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾ ಇರಿಸಿ ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವ ಅಗತ್ಯವಿದೆ.

ಅಬಕಾರಿ ತೆರಿಗೆ
• 2025-26 ನೇ ಹಣಕಾಸು ಸಾಲಿನಲ್ಲಿ ರೂ. 43,000 ಕೋಟಿ ಅಬಕಾರಿ ತೆರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ನವೆಂಬರ್‌ ಅಂತ್ಯದವರೆಗೆ ರೂ.26,215 ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಬಕಾರಿ ತೆರಿಗೆ ಸಂಗ್ರಹದಲ್ಲಿ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ.

• ನಿಗದಿತ ಗುರಿಯನ್ನು ಸಾಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago