ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ನೋಡಿ

ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು ಇಲ್ಲಿವೆ ಓದಿ…

ವಾಣಿಜ್ಯ ತೆರಿಗೆ
• ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ.

• ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ.

• ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ.

• ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು.

• ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ ರೂ. 3,183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

• ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ಅನಾಲಿಸಿಸ್ ವಿಭಾಗವನ್ನು ಬಲಪಡಿಸಬೇಕು.

• ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾ ಇರಿಸಿ ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವ ಅಗತ್ಯವಿದೆ.

ಅಬಕಾರಿ ತೆರಿಗೆ
• 2025-26 ನೇ ಹಣಕಾಸು ಸಾಲಿನಲ್ಲಿ ರೂ. 43,000 ಕೋಟಿ ಅಬಕಾರಿ ತೆರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ನವೆಂಬರ್‌ ಅಂತ್ಯದವರೆಗೆ ರೂ.26,215 ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಬಕಾರಿ ತೆರಿಗೆ ಸಂಗ್ರಹದಲ್ಲಿ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ.

• ನಿಗದಿತ ಗುರಿಯನ್ನು ಸಾಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

5 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

6 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago