ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು ಇಲ್ಲಿವೆ ಓದಿ…
ವಾಣಿಜ್ಯ ತೆರಿಗೆ
• ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ.
• ನವೆಂಬರ್ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್ಟಿ ರೂ.53,522 ಕೋಟಿ, ಕೆಎಸ್ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ.
• ಆರಂಭದ ಐದು ತಿಂಗಳಲ್ಲಿ ಎಪ್ರಿಲ್ನಿಂದ ಆಗಸ್ಟ್ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ.
• ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು.
• ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ ರೂ. 3,183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.
• ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ಅನಾಲಿಸಿಸ್ ವಿಭಾಗವನ್ನು ಬಲಪಡಿಸಬೇಕು.
• ಬೋಗಸ್ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾ ಇರಿಸಿ ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವ ಅಗತ್ಯವಿದೆ.
ಅಬಕಾರಿ ತೆರಿಗೆ
• 2025-26 ನೇ ಹಣಕಾಸು ಸಾಲಿನಲ್ಲಿ ರೂ. 43,000 ಕೋಟಿ ಅಬಕಾರಿ ತೆರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ನವೆಂಬರ್ ಅಂತ್ಯದವರೆಗೆ ರೂ.26,215 ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಬಕಾರಿ ತೆರಿಗೆ ಸಂಗ್ರಹದಲ್ಲಿ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ.
• ನಿಗದಿತ ಗುರಿಯನ್ನು ಸಾಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…