ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ನೋಡಿ

ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು ಇಲ್ಲಿವೆ ಓದಿ…

ವಾಣಿಜ್ಯ ತೆರಿಗೆ
• ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ.

• ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ.

• ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ.

• ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು.

• ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ ರೂ. 3,183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

• ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ಅನಾಲಿಸಿಸ್ ವಿಭಾಗವನ್ನು ಬಲಪಡಿಸಬೇಕು.

• ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾ ಇರಿಸಿ ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವ ಅಗತ್ಯವಿದೆ.

ಅಬಕಾರಿ ತೆರಿಗೆ
• 2025-26 ನೇ ಹಣಕಾಸು ಸಾಲಿನಲ್ಲಿ ರೂ. 43,000 ಕೋಟಿ ಅಬಕಾರಿ ತೆರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ನವೆಂಬರ್‌ ಅಂತ್ಯದವರೆಗೆ ರೂ.26,215 ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಬಕಾರಿ ತೆರಿಗೆ ಸಂಗ್ರಹದಲ್ಲಿ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ.

• ನಿಗದಿತ ಗುರಿಯನ್ನು ಸಾಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

32 minutes ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

11 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

12 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

17 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

19 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

22 hours ago