ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ- ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಾತು…..

ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್‌ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು ₹80,000 ಕೋಟಿ ನಷ್ಟವಾಗಿದೆ ಎಂದರು.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ ₹5,495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ ₹3,000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ ₹3,000 ಕೋಟಿ ಸೇರಿದಂತೆ ಒಟ್ಟು ₹11,495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ ₹80,000 ಕೋಟಿ ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ ಎಂದು ತಿಳಿಸಿದರು.

ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್‌ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದು ಹೇಳಿದರು.

ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ ಎಂದರು.

ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ ₹1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿದ್ದಾರೆ ಎಂದು ಹೇಳಿದರು.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

3 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

12 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

22 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

24 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago