ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ:
ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.
15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ.
15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.
ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದನ್ನು ತಿಳಿಸಿದರು.
ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.
ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು.
16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ವಿವರಿಸಿದರು.
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…