ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ:

ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದನ್ನು ತಿಳಿಸಿದರು.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು.

16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ವಿವರಿಸಿದರು.

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

18 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

1 day ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago