ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ:

ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದನ್ನು ತಿಳಿಸಿದರು.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು.

16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ವಿವರಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

7 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago