ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ:

ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದನ್ನು ತಿಳಿಸಿದರು.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು.

16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ವಿವರಿಸಿದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

16 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

18 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

19 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

23 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago