ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ:

ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದನ್ನು ತಿಳಿಸಿದರು.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು.

16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ವಿವರಿಸಿದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

45 minutes ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

54 minutes ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

6 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

15 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago