ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರ ವಹಿಸಿವೆ- ಸಿಎಂ ಸಿದ್ದರಾಮಯ್ಯ

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದರು.

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದು ತಿಳಿಸಿದ್ದಾರೆ.

ಬಿಜೆಪಿ ಬಿಆರ್‌ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ ಎಂದಿದ್ದಾರೆ.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ ಎಂದರು.

ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

5 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

19 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

20 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

21 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

21 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago