ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರ ವಹಿಸಿವೆ- ಸಿಎಂ ಸಿದ್ದರಾಮಯ್ಯ

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದರು.

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದು ತಿಳಿಸಿದ್ದಾರೆ.

ಬಿಜೆಪಿ ಬಿಆರ್‌ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ ಎಂದಿದ್ದಾರೆ.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ ಎಂದರು.

ರಾಜಸ್ತಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋತ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ರಾಜಸ್ತಾನ ಮತ್ತು ಚತ್ತೀಸ್ ಘಡ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

9 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

17 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

22 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago