ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಪಂಜಾಬ್ ರಾಜ್ಯ ಘಟಕಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ

 

2024ರ ಲೋಕಸಭೆ ಚುನಾವಣೆಗೆ ಮುನ್ನವೇ ನಾಲ್ಕು ಪ್ರಮುಖ ರಾಜ್ಯ ಘಟಕಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿರುವ ಬಿಜೆಪಿ ಹೈಕಮಾಂಡ್. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರೋ ಬಿಜೆಪಿ.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ.ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ.ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್.

ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.

ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಗಳ ನಡುವೆ ಬಿಜೆಪಿಯಲ್ಲಿ ಸಂಘಟನಾ ಪುನರ್ ರಚನೆಯ ಬಗ್ಗೆ ಚರ್ಚೆ ನಡೆದಿದೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

9 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

11 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

14 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago