2024ರ ಲೋಕಸಭೆ ಚುನಾವಣೆಗೆ ಮುನ್ನವೇ ನಾಲ್ಕು ಪ್ರಮುಖ ರಾಜ್ಯ ಘಟಕಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿರುವ ಬಿಜೆಪಿ ಹೈಕಮಾಂಡ್. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರೋ ಬಿಜೆಪಿ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ.ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ.ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್.
ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.
ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಗಳ ನಡುವೆ ಬಿಜೆಪಿಯಲ್ಲಿ ಸಂಘಟನಾ ಪುನರ್ ರಚನೆಯ ಬಗ್ಗೆ ಚರ್ಚೆ ನಡೆದಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…