ತೆಲಂಗಾಣ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ- ಸಿಎಂ ಸಿದ್ದರಾಮಯ್ಯ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸೋಲಿನ ಭೀತಿಗೀಡಾಗಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ದ ಕಾಂಗ್ರೆಸ್ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವೂ ಆಗಿದೆ. ಒಂಬತ್ತುವರೆ ವರ್ಷಗಳ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯ ಶೇಕಡಾ ಹತ್ತರಷ್ಟು ಭರವಸೆಗಳನ್ನು ಕೂಡಾ ಈಡೇರಿಸಿಲ್ಲ ಎನ್ನುವುದು ಅಲ್ಲಿನ ಮತದಾರರಿಗೆ ಅರಿವಾಗಿದೆ. ಇದರಿಂದ ಅಲ್ಲಿ ಪ್ರಧಾನಿ ಮೋದಿಯವರ ಪ್ರಚಾರದಿಂದ ಆ ಪಕ್ಷಕ್ಕೆ ನಷ್ವವೇ ಹೊರತು ಲಾಭ ಇಲ್ಲ ಎಂದಿದ್ದಾರೆ.

ನುಡಿದಂತೆ ನಡೆದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಬದ್ಧತೆಯಿಂದ ತೆಲಂಗಾಣದ ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಅಲ್ಲಿನ ಮತದಾರರು ನಂಬುವಂತಾಗಿದೆ. ಇದರಿಂದ ತೆಲಂಗಾಣದ ಮತದಾರರ ವಿಶ್ವಾಸಾರ್ಹತೆಯನ್ನು ನಮ್ಮ ಪಕ್ಷ ಗಳಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಕರ್ನಾಟಕದವರೇ ಆಗಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣಗಳಲ್ಲಿ ‘‘ಕರ್ನಾಟಕ ಮಾದರಿ’’ ಆಡಳಿತವನ್ನು ಉಲ್ಲೇಖಿಸಿ ಮತದಾರರನ್ನು ಸೆಳೆಯತೊಡಗಿದ್ದಾರೆ ಎಂದು ಹೇಳಿದ್ದಾರೆ.

2013-18 ರ ಅವಧಿಯ ನಮ್ಮ ಹಿಂದಿನ ಸರ್ಕಾರ ಮತ್ತು  ಆರು ತಿಂಗಳ ಅವಧಿಯ ಸರ್ಕಾರದ ಸಾಧನೆಗಳನ್ನು ಆ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮನೆಮನೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಮರೆತುಬಿಟ್ಟಿರುವ ರಾಜ್ಯದಲ್ಲಿ ಬಿಆರ್ ಎಸ್ ಪಕ್ಷ ಮತ್ತು ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎದುರಲ್ಲಿ ತೆಲಂಗಾಣದ ಮತದಾರರಿಗೆ ಕಾಂಗ್ರೆಸ್ ಪಕ್ಷ ಭರವಸೆಯ ಆಶಾಕಿರಣದಂತೆ ಕಾಣಿಸುತ್ತಿರುವ ಕಾರಣದಿಂದಾಗಿಯೇ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಎದ್ದಿದೆ ಎಂದಿದ್ದಾರೆ.

ನರೇಂದ್ರಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಮರುಸಾಬೀತಾಗಲಿದೆ. ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂಬ ದುರುದ್ದೇಶದಿಂದ ಬಿಜೆಪಿಯಲ್ಲಿರುವ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರಮೋದಿ ಮತ್ತು ಅಮಿತ್ ಶಾ ಜೋಡಿ ತುಳಿದುಹಾಕಿರುವುದರಿಂದ ಯಾವ ರಾಜ್ಯದಲ್ಲಿಯೂ ಜನತೆ ನಂಬಿಕೆ ಇಡಬಲ್ಲಂತಹ ಯಾವ ಸ್ಥಳೀಯ ನಾಯಕರು ಇಲ್ಲದಾಗಿದೆ ಎಂದರು.

ಪ್ರತ್ಯೇಕ ರಾಜ್ಯವಾಗಿ ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು  ವಿಳಂಬವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಆಶೋತ್ತರದ ಹೆಸರಲ್ಲಿ ಜನರನ್ನು ಮರುಳು ಮಾಡುತ್ತಾ ಬಂದಿರುವ  ಬಿಆರ್ ಎಸ್ ಪಕ್ಷದ ನಾಟಕ ಅಲ್ಲಿನ ಮತದಾರರಿಗೆ ಅರಿವಾಗಿದೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಮಿತಿಮೀರಿದ ಭ್ರಷ್ಟಾಚಾರದಿಂದಾಗಿ ಬಿಆರ್ ಎಸ್ ಪಕ್ಷ ಜನತೆಯ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದೆ. ಬಿಜೆಪಿ ಮತ್ತು ಬಿಆರ್ ಎಸ್  ಎರಡೂ ಪಕ್ಷಗಳನ್ನು ಹಿಂದಕ್ಕಟ್ಟಿ ಮುಂದೋಡುತ್ತಿರುವ ಕಾಂಗ್ರೆಸ್ ಪಕ್ಷ ಅಚ್ಚರಿಯ ಗೆಲುವನ್ನು ದಾಖಲಿಸಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

7 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

9 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

10 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

10 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

12 hours ago